ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 : ನೆಹರು ಯುವ ಕೇಂದ್ರ, ರಂಗ ಭಂಡಾರ ಕಲಾ ಸಂಘದ ಸಹಯೋಗದೊಂದಿಗೆ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಸೌಮ್ಯ ಮಂಜುನಾಥ್ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಗಾಟಿಸಿ ಮಾತನಾಡುತ್ತ ಶಿಕ್ಷಣದಿಂದ ಮಾತ್ರ ಹೆಣ್ಣಿನ ಸಬಲೀಕರಣ ಸಾಧ್ಯ. ನಿರಂತರವಾಗಿ ಹೆಣ್ಣಿನ ಮೇಲೆ ಶೋಷಣೆ, ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ನಡೆಯುತ್ತಿದೆ. ಇವೆಲ್ಲವನ್ನು ಧೈರ್ಯದಿಂದ ಎದುರಿಸಿ
ಸ್ವಾವಲಂಭಿಯಾಗಿ ಬದುಕಬೇಕಾದರೆ ಶಿಕ್ಷಣವಂತಳಾಗಿ ಕಾನೂನು ಅರಿವು ಮೂಡಿಸಿಕೊಳ್ಳುವಂತೆ ತಿಳಿಸಿದರು.
ಬಡಾವಣೆ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಜಿ.ಯಶೋಧ, ಎಸ್.ಜೆ.ಎಂ.ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಮನ ಎಸ್.ಅಂಗಡಿ, ನ್ಯಾಯವಾದಿ ಸೌಮ್ಯ ಸುಮ ರಾಜಶೇಖರ್, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಧರ ಸಿ. ರಂಗ ಭಂಡಾರ ಕಲಾ ಸಂಘದ ಅಧ್ಯಕ್ಷೆ ಬಿ.ನಿರ್ಮಲ ಈ ಸಂದರ್ಭದಲ್ಲಿ ಹಾಜರಿದ್ದರು.


