Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿ ಬೆಳೆ ಹಾನಿ: ರೂ.62.86 ಕೋಟಿ ಬಿಡುಗಡೆ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.10) : ಜಿಲ್ಲೆಯಲ್ಲಿ 2021-22ನೇ ಸಾಲಿನ ನವೆಂಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ ಆಗಿದ್ದು, ಬೆಳೆ ಹಾನಿಯ ಕುರಿತು ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕಾರ್ಯಯನ್ನು ಮುಗಿಸಿದೆ.

ಜಿಲ್ಲೆಯಾದ್ಯಂತ ಶೇಂಗಾ ಬೆಳೆಯಲ್ಲಿ ಒಟ್ಟು 56119 ಹೆಕ್ಟೇರ್, ರಾಗಿ ಬೆಳೆಯಲ್ಲಿ 19030 ಹೆಕ್ಟೇರ್, ಕಡಲೆ ಬೆಳೆಯಲ್ಲಿ 15307 ಹೆಕ್ಟೇರ್, ಮೆಕ್ಕೆಜೋಳದಲ್ಲಿ 1979 ಹೆಕ್ಟೇರ್ ಹಾಗೂ ಇತರೆ ಬೆಳೆಗಳಲ್ಲಿ 870.40 ಹೆಕ್ಟೇರ್‍ಗಳಂತೆ ಒಟ್ಟು 93305.40 ಹೆಕ್ಟೇರ್‍ಗಳಷ್ಟು ಬೆಳೆಹಾನಿಯಾಗಿರುವುದು ವರದಿಯಾಗಿದೆ.

ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 02ರಂದು ಮೊದಲನೇ ಹಂತದಲ್ಲಿ ಚಿತ್ರದುರ್ಗ ಜಿಲ್ಲೆಯ 13813 ರೈತ ಫಲಾನುಭವಿಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಒಟ್ಟು ಮೊತ್ತ ರೂ.9.29 ಕೋಟಿ ಬಿಡುಗಡೆಯಾಗಿರುತ್ತದೆ. 2ನೇ ಹಂತವಾಗಿ 20734 ರೈತ ಫಲಾನುಭವಿಗಳಿಗೆ ರೂ.13.88 ಕೋಟಿ ಬಿಡುಗಡಯಾಗಿರುತ್ತದೆ.

ಮುಂದುವರೆದು ಮೂರನೇ ಹಂತವಾಗಿ 57369 ಫಲಾನುಭವಿಗಳಿಗೆ ರೂ.39.69 ಕೋಟಿಯನ್ನೊಳಗೊಂಡಂತೆ ಇಲ್ಲಿಯವರೆಗೆ ಒಟ್ಟು 91916 ಫಲಾನುಭವಿಗಳಿಗೆ ಒಟ್ಟು ಮೊತ್ತ ರೂ.62.86 ಕೋಟಿ ಬಿಡುಗಡೆಯಾಗಿರುತ್ತದೆ.

ಉಳಿದ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಡಾ; ಟಿ. ರಮೇಶ್‍ಕುಮಾರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!