Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 22 ಕರ್ನಾಟಕ ಬಂದ್ ; ಏನುರುತ್ತೇ..? ಏನಿರಲ್ಲ..?

---Advertisement---

ಬೆಂಗಳೂರು; ಮಕ್ಕಳಿಗೆ ಪರೀಕ್ಷಾ ಸಮಯ. ಆದರೆ ಈ ಸಮಯದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಬೆಳಗಾವಿ ಗಡಿಯಲ್ಲಿನ ಮರಾಠಿಗರ ಪುಂಡಾಟಿಕೆ, ಬಸ್ ಚಾಲಕ ಸೇರಿದಂತೆ ಕನ್ನಡಿಗರ ಮೇಲಿನ ದರ್ಪ, ದೌರ್ಜನ್ಯದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಕನ್ನಡ ಒಕ್ಕೂಟ – ಕರ್ನಾಟಕ ರಾಜ್ಯ ಬಂದ್ ಗೆ ಕರೆ ನೀಡಿದ್ದು, ಶನಿವಾರ ಈ ಬಂದ್ ನಡೆಯಲಿದೆ. ಬಂದ್ ನಡೆಯುವ ದಿನ ಏನು ಇರಲಿದೆ..? ಏನು ಇರಲ್ಲ ಎಂಬ ಮಾಹಿತಿ ಇಲ್ಲಿದೆ. ಬಂದ್ ಗೆ ಬೆಂಗಳೂರು, ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಬೆಂಬಲ ಸಿಗುವ ಸಾಧ್ಯತೆ ಇದೆ. ಕರ್ನಾಟಕ ಬಂದ್ ದಿನ ಸಾರಿಗೆ, ಬಸ್, ಆಟೋ ಸಂಚಾರ ಇರುವುದಿಲ್ಲ. ಇನ್ನು ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಗಳ ಸಂಚಾರವೂ ಅನುಮಾನ ಎನ್ನಲಾಗಿದೆ. ಆಟೋಗಳ ಸಂಚಾರವೂ ಇರುವುದಿಲ್ಲ. ರಾಜ್ಯದ ಬ್ಯಾಂಕ್ ಗಳ ಕಾರ್ಯ ನಿರ್ವಹಣೆ ಅಂದು ಬಂದ್ ಆಗಿರುತ್ತದೆ. ಅಗತ್ಯ ವಸ್ತುಗಳಾದ ತರಕಾರಿ, ಹಾಲು, ಹಣ್ಣು, ವೈದ್ಯಕೀಯ ಸೇವೆಗಳು ಎಂದುನಂತೆ ಕಾರ್ಯ ನಿರ್ವಹಿಸಲಿವೆ. ಈ ಬಂದ್ ಗೆ ಚಿತ್ರರಂಗ ಕೂಡ ಬೆಂಬಲ ನೀಡಿದ್ದು, ಅಂದು ಯಾವುದೇ ರೀತಿಯ ಶೂಟಿಂಗ್ ಇರುವುದಿಲ್ಲ.

ಇನ್ನು ಬಹಳ ಮುಖ್ಯವಾಗಿ ಶಾಲಾ ಕಾಲೇಜುಗಳು ತೆರೆದಿರುತ್ತವಾ ಎಂಬ ವಿಚಾರ ಬಹಳ ಮುಖ್ಯವಾಗುತ್ತದೆ. ಶಿಕಗಷಣ ಇಲಾಖೆಗಳು ಈ ಬಗ್ಗೆ ಇನ್ನು ಯಾವುದೇ ರೀತಿಯ ನಿರ್ಧಾರವನ್ನು ತಿಳಿಸಿಲ್ಲ. ಆದರೆ ಪರೀಕ್ಷಾ ಸಮಯದಲ್ಲಿ ಇದೆಂಥ ಬಂದ್ ಎಂದು ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಬಂದ್ ಗೆ ಎಲ್ಲರೂ ಬೆಂಬಲ ನೀಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment