Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಮನನೊಂದಿದ್ದೇನೆ, ರಾಜೀನಾಮೆ ನೀಡ್ತೇನೆ ; ಶಾಸಕ ಬಿ.ಆರ್.ಪಾಟೀಲ್

---Advertisement---

ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು ಹೈಡ್ರಾಮಾವನ್ನೇ ಮಾಡಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4ರಷ್ಟು ಮೀಸಲಾತಿ ನೀಡುವ ವಿಧೇಯಕ ಮಂಡನೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿದ್ದ ಪೀಠವನ್ನೇ ಏರಿ ಅವರ ಮೇಲೆಯೇ ಬಜೆಟ್ ಪ್ರತಿಯನ್ನು ಹರಿದು ಹಾಕಿ ಅಗೌರವ ಸೂಚಿಸಿದ್ದಾರೆ. ಇದರಿಂದ ಹತ್ತು ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿಕೆ ಮಾಡಿದ್ದರು. ಈ ಘಟನೆಗೆ ನೊಂದ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಿ.ಆರ್.ಪಾಟೀಲ್ ಅವರು, ಸದನದಲ್ಲಿ ನಡೆದಿರುವ ಘಟನೆ ನನಗೆ ತೀವ್ರ ಬೇಸರ ತರಿಸಿದೆ. ವಿಪಕ್ಷದ ಸದಸ್ಯರುಗಳು ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಾರೆ. ಈ ರೀತಿಯ ಘಟನೆ ಆಗಬಾರದು. ನಾನು ಮನನೊಂದು ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಲ್ಲಿಯೇ ಕಾಣಿಸಿಕೊಂಡರು. ಬಿ.ಆರ್.ಪಾಟೀಲ್ ಅವರ ಸಮಸ್ಯೆಯನ್ನು ಆಲಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿ.ಆರ್.ಪಾಟೀಲ್ ನನ್ನ ಸ್ನೇಹಿತ. ಅವರ ಜೊತೆಗೆ ನಾನು ಮಾತನಾಡುತ್ತೇನೆ ಎಂದರು.

ಆದರೆ ವಿಧಾನಸಭೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದಕ್ಕೆ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಭಾರೀ ಗದ್ದಲ, ಕೋಲಾಹಲದ ನಡುವೆಯೇ ಬಜೆಟ್ ಅನ್ನು ಅಂಗೀಕಾರ ಮಾಡಲಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಎದ್ದ ಗದ್ದಲದಿಂದ ಕಲಾಪವನ್ನೇ ಹತ್ತು ನಿಮಿಷಗಳ ಕಾಲ ಮುಂದೂಡಿಕೆ ಮಾಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment