Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ಲಕ್ಷ ವಂಚನೆಗೆ ಆತ ಬಳಸಿದ್ದು ತಿರುಪತಿ ತಿಮ್ಮಪ್ಪನ ನಕಲಿ ಟಿಕೆಟ್..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಮೋಸ ಮಾಡೋದಕ್ಕೆ ಯಾವ ದಾರಿಯಾದ್ರೂ ಏನು. ಮನುಷ್ಯ ಆದ್ರೂ ಓಕೆ ದೇವರಾದ್ರೂ ಓಕೆ. ವಂಚನೆ ಮಾಡಬೇಕೆಂದುಕೊಂಡವನ ಮನದಲ್ಲಿ ಯಾವ ಭಯವೂ ಇರೋದಿಲ್ಲ. ಅಲ್ಲೊಬ್ಬ ಮಹಾನುಭಾವ ಮಾಡಿದ್ದು ಅದೇ. ಹಣ ಮಾಡೋಕೆ ದೇವರನ್ನೇ ಬಂಡವಾಳವಾಗಿಸಿಕೊಂಡಿದ್ದ. ಅದು ತಿರುಪತಿ ತಿಮ್ಮಪ್ಪನನ್ನ.

ಒಂದಷ್ಟು ಮಾಹಿತಿ ಗೊತ್ತೆ ಇರುತ್ತೆ ಆದ್ರೂ ಮೋಸ ಹೋದ್ರೆ ಹೇಗೆ. ಅದ್ರಲ್ಲೂ ಎಲ್ಲವೂ ಗೊತ್ತಿದೆ ಅಂದುಕೊಂಡವರೇ ಈ ರೀತಿ ತಿರುಪತಿ ತಿಮ್ಮಪ್ಪನ ಹೆಸರೇಳಿಕೊಂಡು ವಂಚನೆ ಮಾಡುವವನ ವಲೆಗೆ ಬಿದ್ದು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದು ಚಿಕ್ಕಬಳ್ಳಾಪುರದಲ್ಲಿರುವ ಅಮೇಜಿಂಗ್ ಡ್ರೀಮ್ ಹೆಸರಿನ ಏಜೆನ್ಸಿಯ ಮಾಲಕಿ ಪ್ರಿಯದರ್ಶಿನಿ ಎಂಬುವವರು.

ಆಂಧ್ರಪ್ರದೇಶ ವೆಸ್ಟ್ ಗೋದಾವರಿ ಜಿಲ್ಲೆಯ ಪಂಜಾ ವೇಮವರಂನ ಪಂಜಾ ರಮಣ ಪ್ರಸಾದ್ ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಟಿಕೆಟ್ ಬುಕ್ ಮಾಡಿಕೊಡುವುದಾಗಿ ಹೇಳಿ ನಂಬಿಸಿ ನೂರಾರು ಟಿಕೆಟ್‍ಗಳನ್ನು ಕೊಟ್ಟಿದ್ದಾನೆ. ಆದರೆ ಕೊಟ್ಟ ಟಿಕೆಟ್‍ಗಳನ್ನು ಪಡೆದು ತಿಮ್ಮಪ್ಪನ ದರ್ಶನಕ್ಕೆ ತೆರಳಿದಾಗ ಆತ ನೀಡಿದ್ದ ಟಿಕೆಟ್‍ಗಳು ನಕಲಿ ಎಂಬುದು ತಿಳಿದು ಬಂದಿದೆ.

ಅಷ್ಟರಲ್ಲಾಗಲೇ ಪ್ರಿಯದರ್ಶಿನಿ ಪಂಜಾ ರಮಣ ಪ್ರಸಾದ್ ಖಾತೆಗೆ 1,28,700 ರೂಪಾಯಿಯನ್ನ ಜಮಾ ಮಾಡಿದ್ರು. ಅದು ನಕಲಿ ಎಂದು ಗೊತ್ತಾದಾಗ ಕರೆ ಮಾಡಿದ್ರೆ ರಮಣ ಪ್ರಸಾದ್ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಇದೋಗ ಪ್ರಿಯದರ್ಶಿನಿ ನ್ಯಾಯಕ್ಕಾಗಿ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!