Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಶಿವಗಂಗಮ್ಮ ನಿಧನ : ನೇತ್ರದಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 24 : ತಾಲ್ಲೂಕಿನ ಹೆಗ್ಗೆರೆ ಗ್ರಾಮದ ವಾಸಿ ಶ್ರೀಮತಿ ಶಿವಗಂಗಮ್ಮ (75ವರ್ಷ) ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಜಿಲ್ಲಾ ಆಸ್ಪತ್ರೆಯ ನೌಕರ ವೈ. ಶ್ರೀಧರ್ ಮೂರ್ತಿಯವರು ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ಸ್ವ ಗ್ರಾಮ ಹೆಗ್ಗೆರೆಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೇತ್ರದಾನ : ಮೃತರ ಎರಡು ಕಣ್ಣುಗಳನ್ನು ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಚಿತ್ರದುರ್ಗ ಇವರಿಗೆ ನೇತ್ರದಾನ ಮಾಡಿ ಕುಟುಂಬದ ಸದಸ್ಯರು ಮಾನವೀಯತೆ ಮೆರೆದಿದ್ದಾರೆ.
ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಸಂಸ್ಥೆಯು ಪ್ರಶಂಸನಾ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ಟಿ. ವೆನಿಲಾ, ಡಾ. ಪ್ರಕೃತಿ, ರಾಮು, ಎಸ್.ವೀರೇಶ್, ಟಿ.ವೀರಭದ್ರಸ್ವಾಮಿ, ಎಸ್.ವಿ.ಗುರುಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment