Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಸಾಮಾಜಿಕ ನ್ಯಾಯಕ್ಕಾಗಿ ಸದಾ ಹೋರಾಟ ನಡೆಸುತ್ತಿರುವ ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿಯ ನಾಗರಾಜ್ ಟಿ. ಇವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕನ್ನಡ ಫಿಲಂ ಚೇಂಬರ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ನಾಗರಾಜ್ ಟಿ.ಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಎಂ.ಎಸ್.ರವೀಂದ್ರ ಕಾರ್ಮಿಕರ ಸಂರಕ್ಷಣಾ ವೇದಿಕೆ ಹಾಗೂ ನಿಸರ್ಗ ಚಾರಿಟಬಲ್ ಟ್ರಸ್ಟ್ ಮುಖಾಂತರ ಕಾರ್ಮಿಕರು, ದಲಿತರು, ರೈತರು, ಶೋಷಿತರ ಪರ ಹೋರಾಟದಲ್ಲಿ ತೊಡಗಿಕೊಂಡಿರುವ ನಾಗರಾಜ್ ಟಿ. ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆ ಹಾಗೂ ವಿಕಲಚೇತನರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವುದಕ್ಕೆ ಪ್ರಶಸ್ತಿ ಸಂದಿದೆ ಎಂದು ಗುಣಗಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾಗರಾಜ್ ಟಿ. ನನ್ನ ಹೋರಾಟಕ್ಕೆ ಇನ್ನು ಹೆಚ್ಚಿನ ಬಲ ಬಂದಂತಾಗಿದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸಿದ್ದಗಂಗಾಮಠದ ಡಾ.ಶಿವಕುಮಾರ ಮಹಾಸ್ವಾಮಿಗಳೆ ನನ್ನ ಹೋರಾಟಕ್ಕೆ ಪ್ರೇರಣೆ ಎಂದು ಹೇಳಿದರು.
ಹಿರಿಯ ನಟ ಮೈಕೋ ನಾಗರಾಜ್, ಲೋಕಾಯುಕ್ತ ಡಿ.ವೈ.ಎಸ್ಪಿ. ರಾಜೇಶ್, ನಟಿ ಮಹಾಲಕ್ಷ್ಮಿ, ಭಾವನ, ನಾಗೇಂದ್ರಸ್ವಾಮಿ, ರಂಗಭೂಮಿ ಕಲಾವಿದರು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...