Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

---Advertisement---

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 :

ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ ಜರುಗುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.

ಪ್ರಚಾರ ರಥ :
ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ಈ ಬಾರಿ ಕನ್ನಡ ರಥವನ್ನು ನಿರ್ಮಿಸಲಾಗಿದ್ದು, ತಾಲ್ಲೂಕಿನ ಎಲ್ಲ ಹೋಬಳಿ ಕೇಂದ್ರಗಳಿಗೆ ಭೇಟಿ ನೀಡಿದೆ. ತಾಲ್ಲೂಕು ಕೇಂದ್ರದಿಂದ ಆರಂಭವಾದ ಈ ರಥವು ಹೋಬಳಿ ಕೇಂದ್ರ ಮತ್ತು ಪ್ರಮುಖ ಗ್ರಾಮಗಳಲ್ಲಿ ಸಂಚರಿಸಿದೆ. ಆಯಾ ಗ್ರಾಪಂ ಜನಪ್ರತಿನಿಧಿಗಳು ಈ ರಥ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಪ್ರೊ. ಜಿ.ಪರಮೇಶ್ವರಪ್ಪನವರ ಅಧ್ಯಕ್ಷತೆಯಲ್ಲಿ ಗೋಷ್ಠಿಗಳು ಜರುಗಲಿವೆ. ಬಾಳೆಹೊಸೂರಿನ ಭಾವೈಕ್ಯತ ಸಂಸ್ಥಾನದ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ಪ್ರಮುಖ ಮಠಾದೀಶರು ನಾನಾ ಗೋಷ್ಠಿಗಳಲ್ಲಿರಲಿದ್ದಾರೆ.

ಸಂವಿಧಾನ ಸೌಧದಲ್ಲಿ ಸಮ್ಮೇಳನ ಜರುಗಲಿದ್ದು, ಡಾ.ಡಿ.ಎಂ.ನಂಜುಂಡಪ್ಪ ಸಭಾಂಗಣ ಎಂದು ಹೆಸರಿಸಲಾಗಿದೆ. ಸೌಧದ ಮುಂಭಾಗದಲ್ಲಿ 25 ಕ್ಕೂ ಹೆಚ್ಚು ಪುಸ್ತಕ ಮತ್ತು ಮಾರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 8.30 ಕ್ಕೆ ಧ್ವಜಾರೋಹಣ ನೆರವೇರಲಿದೆ. ನಂತರ ಜರುಗುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕಹಳೆ, ವೀರಗಾಸೆ, ಛತ್ರಿ,ಚಾಮರ ಸೇರಿದಂತೆ ನಾನಾ ಕಲಾತಂಡಗಳು ಪಾಲ್ಗೊಳ್ಳಲಿವೆ.

ಊಟದ ಮೆನು :
ಬೆಳಗ್ಗೆ ಉಪ್ಪಿಟ್ಟು ,ಕೇಸರಿಬಾರ್, ಮಧ್ಹಾಹ್ನ ಗೋಧಿ ಪಾಯಸ ಮತ್ತು ಅನ್ನ ಸಾಂಬಾರ್ ಮತ್ತು ರಾತ್ರಿ ಶ್ಯಾವಿಗೆ ಪಾಯಸ ಮತ್ತು ಅನ್ನ ಸಾಂಬಾರ್ ಮೆನು ಸಿದ್ಧಗೊಂಡಿದೆ.
ರಾರಾಜಿಸುತ್ತಿರುವ ಕೆಂಪು, ಹಳದಿ
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡದ ಬಾವುಟಗಳು, ಫ್ಲೆಕ್ಸ್, ಬಂಟಿಗ್ಸ್‍ಗಳನ್ನು ಅಳವಡಿಸಲಾಗಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕøತರ ಭಾವಚಿತ್ರಗಳನ್ನು ನಾಲ್ಕು ಕಡೆಗಳಲ್ಲಿ ಅಳವಡಿಸಲಾಗಿದೆ. ಸಂವಿಧಾನ ಸೌಧದ ಮುಂಭಾಗ ಮತ್ತು ಒಳಾಂಗಣದಲ್ಲಿ ನಾನಾ ರೀತಿಯ ವಿದ್ಯುತ್ ಅಲಂಕಾರ ಕೈಗೊಳ್ಳಲಾಗಿದೆ.

ಸ್ವಾಗತ ಸಮಿತಿ ಅಧ್ಯಕ್ಷ ಡಾ.ಎಂ.ಚಂದ್ರಪ್ಪ, ಜಿಲ್ಲೆಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಟಿ,ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ, ಜಿಪಂ ಸಿಇಒ ಎಸ್.ಜಿ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...