ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಇದೇ ತಿಂಗಳ 16 ರಂದು ಚಂದ್ರಗ್ರಹಣ ಸಂಭವಿಸಿತ್ತು. ಆದರೆ ಭಾರತದಲ್ಲಿ ಹಗಲಿನಲ್ಲಿ ಇದ್ದುದರಿಂದ ಗೋಚರಿಸಿರಲಿಲ್ಲ. ಇದೀಗ 29 ರಂದು ಸಂಜೆ 4.25 ರಿಂದ 30 ರ ಮಧ್ಯಾಹ್ನದವರೆಗೂ ಸೂರ್ಯಗ್ರಹಣ ಸಂಭವಿಸುತ್ತದೆ. ಆದರೆ ಈ ಗ್ರಹಣವೂ ಸಹಾ ಭಾರತದಲ್ಲಿ ಎಲ್ಲಿಯೂ ಗೋಚರಿಸುವುದಿಲ್ಲ.
ಉತ್ತರ ಮತ್ತು ಪೂರ್ವ ಅಮೆರಿಕಾ, ಕೆನಡಾ, ಆಫ್ರಿಕಾ, ಯುರೋಪ್ ಖಂಡದ ಕೆಲವು ಭಾಗಗಳಲ್ಲಿ ಭಾಗಶಃ ಸೂರ್ಯಗ್ರಹಣವನ್ನು ಅವರು ನೋಡಬಹುದಾಗಿದೆ. ಆದರೂ ನಮ್ಮ ದೇಶದ ಜನರಲ್ಲಿ ಗ್ರಹಣದ ಪರಿಕಲ್ಪನೆ ಬೇರೆಯೇ ಇರುತ್ತದೆ. ಗ್ರಹಣ ಎಂಬುದು ಆಕಾಶದಲ್ಲಿ ನಡೆಯುವ ನೆರಳು ಬೆಳಕಿನ ಆಟವಷ್ಟೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ, ಅವು ಒಂದೇ ಸಮತಲದಲ್ಲಿ ಇದ್ದಾಗ ಮಾತ್ರ ಸೂರ್ಯಗ್ರಹಣ ಸಂಭವಿಸಲು ಸಾಧ್ಯ. ಅನೇಕ ಗಂಟೆಗಳ ಕಾಲ ಚಂದ್ರ ಸೂರ್ಯನನ್ನು 85 ರಷ್ಟು ಮರೆಮಾಡಿರುತ್ತಾನೆ. ಹಾಗಾಗಿ ಭಾಗಶಃ ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಇದರಿಂದ ಯಾವುದೇ ರೀತಿಯ ಭಯ, ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿಯರಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಪಶು ಪಕ್ಷಿಗಳ ಮೇಲೆಯೂ ಯಾವುದೇ ಪರಿಣಾಮವಿಲ್ಲ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















