Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪಾಸ್ ಪೋರ್ಟ್ ಪಡೆಯಲು ನಕಲಿ ದಾಖಲೆ ನೀಡಿದ್ದ ಆರೋಪಿಗೆ ಒಂದು ವರ್ಷ ಶಿಕ್ಷೆ, ರೂ.8500 ದಂಡ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 : ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಪಡೆಯಲು ಪ್ರಯತ್ನಿಸಿದ ಆರೋಪಿಗೆ ಚಿತ್ರದುರ್ಗ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯ ಒಂದು ವರ್ಷ ಸಾದಾ ಶಿಕ್ಷೆ ಮತ್ತು 8500 ದಂಡ ವಿಧಿಸಿ ತೀರ್ಪು ನೀಡಿದೆ.

ಚಿತ್ರದುರ್ಗ ನಗರದ ರಾಮದಾಸ್ ಕಾಂಪೌಡ್ ವಾಸಿಯಾದ ಜುಲ್ಮೀಕರ್ 2015 ರಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್ ಪೋರ್ಟ ಕಛೇರಿಗೆ ಇ.ಸಿ.ಎನ್.ಆರ್ ಪಾಸ್ ಪೋರ್ಟ ಪಡೆಯುವ ಸಲುವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತಾನು 10ನೇ ತರಗತಿಯನ್ನು ಪಶ್ಚಿಮ ಬಂಗಾಳದ ರಬಿಂದ್ರ ಓಪನ್ ಸ್ಕೂಲ್ ಮಂಡಳಿಯಲ್ಲಿ ವ್ಯಾಸಂಗ ಮಾಡಿ ಅಂಕಪಟ್ಟಿ ಪಡೆದಿರುವುದಾಗಿ ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ ಅರ್ಜಿಯ ಜೊತೆ ಸಲ್ಲಿಸಿದ್ದನು.
ಈ ಅರ್ಜಿಯೊಂದಿಗೆ ಸಲ್ಲಿಸಿದ ದಾಖಲೆಗಳನ್ನು ಪಾಸ್ ಪೋರ್ಟ್ ಅಧಿಕಾರಿಗಳು ಪರಿಶೀಲಿಸಿದಾಗ ಅಂಕಪಟ್ಟಿ ಮತ್ತು ಪ್ರಮಾಣ ಪತ್ರದ ಬಗ್ಗೆ ಮೇಲ್ನೋಟಕ್ಕೆ ಸಂದೇಹಾಸ್ಪದವಾಗಿ ಕಂಡುಬಂದಿದೆ. ಅದರ ನೈಜತೆಯನ್ನು ಪರಿಶೀಲಿಸಲು ಪಶ್ಚಿಮ ಬಂಗಾಳದ ರಬಿಂದ್ರ ಓಪನ್ ಸ್ಕೂಲ್ ಮಂಡಳಿಗೆ ಅಂಕಪಟ್ಟಿಯನ್ನು ಕಳಿಸಿಕೊಟ್ಟು ಪರಿಶೀಲಿಸಿದಾಗ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳು ನಕಲಿಯಾಗಿರುತ್ತವೆ ಎಂದು ತಿಳಿದುಬಂದಿರುತ್ತದೆ.

ಆರೋಪಿಯು ಇ.ಸಿ.ಎನ್.ಆರ್ ಪಾಸ್ ಪೋರ್ಟ ಪಡೆಯಲು ಪಾಸ್ ಪೋರ್ಟ ಕಛೇರಿಗೆ ನಕಲಿ ಸೃಷ್ಟಿಸಿದ ದಾಖಲೆಯನ್ನು ಸಲ್ಲಿಸಿ ಮೋಸ ಮತ್ತು ವಂಚನೆಯನ್ನು ಮಾಡಿರುತ್ತಾನೆ. ಈ ಬಗ್ಗೆ ಚಿತ್ರದುರ್ಗ ನಗರ ಪೋಲಿಸ್ ಠಾಣೆಯಲ್ಲಿ ರಾಮದಾಸ್ ಕಾಂಪೌಡ್ ನಿವಾಸಿ ಆರೋಪಿ ಜುಲ್ಮೀಕರ್, ವಿರುದ್ದ ಪಾಸ್ ಪೋರ್ಟ ಅಧಿಕಾರಿಗಳು ದೂರು ದಾಖಲಿಸಿದ್ದರು. ಜಿ.ವಿ ನಾಗೇಂದ್ರ ಪ್ರಸಾದ ಎ.ಎಸ್.ಐ ರವರು ಈ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿ ವಾದ ವಿವಾದವನ್ನು ಆಲಿಸಿದ ಚಿತ್ರದುರ್ಗದ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯದ, ನ್ಯಾಯಾಧೀಶರಾದ ಶ್ರೀಮತಿ ಮಮತ ಡಿ. ರವರು ಆರೋಪಿಗೆ
1) ಕಲಂ 465 ಐಪಿಸಿ ಅಪರಾದಕ್ಕಾಗಿ 6 ತಿಂಗಳ ಸಾದಾ ಶಿಕ್ಷೆ 2000 ರೂ ದಂಡ,
2) ಕಲಂ 468 ಅಪರಾದಕ್ಕಾಗಿ 6 ತಿಂಗಳ ಶಿಕ್ಷೆ ಹಾಗೂ 2000 ರೂ ದಂಡ,
3) ಕಲಂ 471 ಐಪಿಸಿ ಅಪರಾದಕ್ಕಾಗಿ 6 ತಿಂಗಳ ಸಾದಾ ಶಿಕ್ಷೆ ಹಾಗೂ 2000 ರೂ ದಂಡ,
4) ಕಲಂ 420 ఐపిసి ಅಪರಾದಕ್ಕಾಗಿ 1 ವರ್ಷ ಸಾದಾ ಶಿಕ್ಷೆ ಹಾಗೂ 2000 ರೂ ದಂಡ, ಮತ್ತು
5) ಕಲಂ 12 ಪಾಸ್ ಪೋರ್ಟ ಕಾಯ್ದೆ ಪ್ರಕಾರ 3 ತಿಂಗಳ ಸಾದಾ ಶಿಕ್ಷೆ, 500 ರೂ ದಂಡವನ್ನು ವಿಧಿಸಿ ನಿನ್ನೆ (ಮಾರ್ಚ್ 28, ಶುಕ್ರವಾರ) ತೀರ್ಪು ನೀಡಿರುತ್ತಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಮಂಜುನಾಥ. ಸಿ., ಇವರು ವಾದ ಮಂಡಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment