Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಯನ್ಮಾರ್ & ಥೈಲ್ಯಾಂಡ್ ಭೂಕಂಪ ; ಕನ್ನಡಿಗರ ಪರಿಸ್ಥಿತಿ ಹೇಗಿದೆ..?

---Advertisement---

ಈಚೆಗಂತೂ ಪ್ರಬಲ ಭೂಕಂಪದಿಂದಾಗಿ ಹಲವು ದೇಶಗಳು ನಲುಗುತ್ತಿವೆ. ಇದೀಗ ಮಯನ್ಮಾರ್ ಹಾಗೂ ಥೈಲ್ಯಾಂಡ್ ನಲ್ಲೂ ಭೂಕಂಪನವಾಗಿದೆ. ಈ ಎರಡು ದೇಶಗಳ ನಡುವೆ 735 ಮೈಲಿಯಷ್ಟು ಅಂತರವಿದೆ. ಪ್ರಬಲ ಭೂಕಂಪನದಿಂದ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಸದ್ಯದ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಅದರಲ್ಲೂ ಮಯನ್ಮಾರ್ ಗಿಂತಲೂ ಥೈಲ್ಯಾಂಡ್ ನಲ್ಲಿ ಸಂಭವಿಸಿದ ಭೂಕಂಪಕ್ಕೆ ಅಧಿಕ ಅನಾಹುತ ನಡೆದಿದೆ. ಇಲ್ಲಿ ಅವಶೇಷಗಳಡಿ ಸಿಲುಕಿದ್ದವರ ಶವಗಳು ಸಿಕ್ಕಿದ್ದರಿಂದ ಸಾವು – ನೋವಿನ ಸಂಖ್ಯೆ ದಿಢೀರನೇ ಏರಿಕೆಯಾಗಿದೆ.

ಅದರಲ್ಲೂ ಗಾಯಾಳುಗಳಿಗೆ ರಕ್ತದ ಅನಿವಾರ್ಯತೆ ಇರುವ ಕಾರಣ ರಕ್ತ ದಾನ‌ ಮಾಡುವಂತೆ ಮನವಿ ಮಾಡಿದ್ದಾರೆ. ಬದುಕುಳಿದವರ ಚಿಜಿತ್ಸೆಗೆ ಭಾರತ 15 ಟನ್ ರಕ್ಷಣಾ ಸಾಮಗ್ರಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ. ಅಲ್ಲಿನವರ ರಕ್ಷಣೆಗೆ ಭಾರತ ಕೂಡ ಜೊತೆಯಾಗಿ ನಿಂತಿದೆ. ಇದರ‌ ನಡುವೆ ಅಲ್ಲಿರುವ ಕನ್ನಡಿಗರದ್ದೇ ಚಿಂತೆಯಾಗಿದೆ. ಆದರೆ ಕನ್ನಡಿಗರಿಗೆ ಏನು ಸಮಸ್ಯೆ ಆಗಿಲ್ಲ ಎಂಬ ಭರವಸೆಯನ್ನು ಸರ್ಕಾರ ನೀಡಿದೆ.

ಪ್ರಬಲ ಭೂಕಂಪದ ಮಧ್ಯೆ ಬ್ಯಾಂಕಾಕ್ ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಎಂಎಲ್ಸಿ ಮರಿತಿಬ್ಬೆಗೌಡ ಮಗಳು, ಅಳಿಯ ಮತ್ತು ಮೊಮ್ಮಗ ಕಳೆದ ಮೂರು ದಿನಗಳ ಹಿಂದೆ ಬ್ಯಾಂಕಾಕ್ ಪ್ರವಾಸಕ್ಕೆಂದು ಹೋಗಿದ್ದರು. ಸದ್ಯ ಸುರಕ್ಷಿತವಾಗಿ ವಾಪಾಸ್ ಬಂದಿದ್ದಾರೆ. ಇನ್ನು ಕೆಲವು ಕನ್ನಡಿಗರು ಸೇಫ್ ಆಗಿದ್ದಾರೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕಿದೆ. ಯಾರಿಗೂ ತೊಂದರೆಯಾಗಿರುವ ಮಾಹಿತಿ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಯನ್ಮಾರ್ ಹಾಗೂ ಥೈಲ್ಯಾಂಡ್ ನ ಭೂಕಂಪದ ಬಗ್ಗೆ ಗೃಹ ಸಚಿವರು ಕೂಡ ಮಾಹಿತಿ ಕಲೆ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...