ಸುದ್ದಿಒನ್, ಹಿರಿಯೂರು, ಮಾರ್ಚ್. 29 : ತೆಂಗಿನ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಅಂಗಲಗೆರೆ ಗ್ರಾಮದ ಎಚ್.ತಿಮ್ಮಯ್ಯ ಅವರ ಜಮೀನಿನಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಖಂಡನೇಹಳ್ಳಿ ಗ್ರಾಮದ ತಿಮ್ಮರಾಯ(50) ಮೃತ ವ್ಯಕ್ತಿ. ಮೃತ ತಿಮ್ಮರಾಯ ಕಳೆದ ಕಳೆದ ಎರ್ಮೂರು ತಿಂಗಳಿನಿಂದ ಅಂಬಲಗೆರೆ ಗ್ರಾಮದ ಎಚ್.ತಿಮ್ಮಯ್ಯ ಅವರ ತೆಂಗಿನ ತೋಟದಲ್ಲಿ ವಾಸವಿದ್ದು ತೋಟ ಕಾಯುವ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ತೆಂಗಿನ ಕಾಯಿ ಕೀಳಲು ಮರ ಹತ್ತಿ ಕಾಯಿ ಕೀಳುತ್ತಿರುವಾಗ ಕಾಲು ಜಾರಿ ಬಿದ್ದು, ಮೃತ ಮಪಟ್ಟಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










