Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ. ನಗರದ ದಾವಣಗೆರೆ ರಸ್ತೆಯ ಟ್ರಾಫಿಕ್ ಪೊಲೀಸ್ ಠಾಣೆಯ ಸಮೀಪವಿರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಶಾಂತಿ ಮತ್ತು ಸಹೋದರತ್ವದ ಹಬ್ಬವಾದ ಈದ್ ಅನ್ನು ಇಂದು ದೇಶಾದ್ಯಂತ ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಬೆಳಗ್ಗಿನಿಂದ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಾ, ಪರಸ್ಪರ ಅಪ್ಪಿಕೊಂಡು, ಹೃತ್ಪೂರ್ವಕ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟಸಂಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment