Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ : ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

---Advertisement---

                    ವರದಿ ಮತ್ತು ಫೋಟೋ ಕೃಪೆ                    ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದಾವಣಗೆರೆ ರಸ್ತೆ ಸಂಚಾರಿ ಪೊಲೀಸ್ ಠಾಣೆ ಸಮೀಪವಿರುವ ದೊಡ್ಡ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಮ ಪವಿತ್ರವಾದ ರಂಜಾನ್ ಹಬ್ಬವನ್ನು  ಸೋಮವಾರ ಶ್ರದ್ದಾ ಭಕ್ತಿಯಿಂದ ಆಚರಿಸಿದರು.

ಬೆಳಿಗ್ಗೆ ಎಂಟು ಗಂಟಗೆ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಮುಸ್ಲಿಂರು ಅಲ್ಲಾನನ್ನು ಪ್ರಾರ್ಥಿಸಿದರು. ಶ್ವೇತ ವಸ್ತ್ರಧಾರಿಗಳಾಗಿದ್ದ ಮುಸ್ಲಿಂರು ತಲೆಗೆ ಬಿಳಿ ಟೋಪಿಗಳನ್ನು ಧರಿಸಿ ಪ್ರಾರ್ಥನೆಗೆ ತೆರಳಿದರೆ ಟೋಪಿ ಇಲ್ಲದವರು ಕರವಸ್ತ್ರಗಳನ್ನು ತಲೆಗೆ ಸುತ್ತಿಕೊಂಡು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ದ್ವಿಚಕ್ರ ವಾಹನ ಹಾಗೂ ಆಟೋಗಳಲ್ಲಿ ಈದ್ಗಾ ಮೈದಾನಕ್ಕೆ ತೆರಳಿದ ಮುಸ್ಲಿಂರು ಮನೆಯಿಂದಲೆ ಚಾಪೆ, ಜಮಖಾನ, ಬೆಡ್‍ಶೀಟ್‍ಗಳನ್ನು ತೆಗೆದುಕೊಂಡು ಹೋಗಿ ಮೈದಾನದಲ್ಲಿ ಹಾಸಿಕೊಂಡು ಪ್ರಾರ್ಥನೆಯಲ್ಲಿ ತೊಡಗಿದರು.

ಮುಸ್ಲಿಂ ಮುಖಂಡರುಗಳಾದ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಎಂ.ಕೆ.ತಾಜ್‍ಪೀರ್, ಸೈಯದ್ ಅಲ್ಲಾಭಕ್ಷಿ, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಎಂ.ಸಿ.ಓ.ಬಾಬು, ಎ.ಜಾಕೀರ್ ಹುಸೇನ್ ಸೇರಿದಂತೆ ಸಾವಿರಾರು ಮುಸ್ಲಿಂರು ಸಾಮೂಹಿಕ ಪ್ರಾರ್ಥನೆಯಲ್ಲಿದ್ದರು.

ಗಾಂಧಿವೃತ್ತ ಹಾಗೂ ಸಂಚಾರಿ ಠಾಣೆ ಸಮೀಪ ಪೊಲೀಸ್ ಬ್ಯಾರಿಕೇಡ್‍ಗಳನ್ನು ರಸ್ತೆಗೆ ಅಡ್ಡ ಇಟ್ಟು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...