Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಯುಗಾದಿ ಹಬ್ಬ ಆಚರಣೆ : ಚಂದ್ರನನ್ನು ಕಣ್ತುಂಬಿಕೊಂಡ ಜನತೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಯುಗಾದಿ ಹಬ್ಬವನ್ನು ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಸಂಭ್ರಮದಿಂದ ಆಚರಿಸಲಾಯಿತು. ಸೋಮವಾರ ಸಂಜೆ 6 : 40 ರ ಸುಮಾರಿಗೆ ಆಗಸದಲ್ಲಿ ಚಂದ್ರನನ್ನು ಕಣ್ತುಂಬಿಕೊಂಡ ನಂತರ ಜನರು ಹಿರಿಯರ ಆಶೀರ್ವಾದ ಪಡೆದು ಪುನೀತರಾದರು.

ಯುಗಾದಿ ಸಂಭ್ರಮವನ್ನು ಭಕ್ತರು ಭಾನುವಾರ ಮನೆಗೆ ತಳಿರು ತೋರಣ ಕಟ್ಟಿ, ಎಣ್ಣೆ ನೀರಿನ ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ಮನೆಯಲ್ಲಿ ಪೂಜೆ ಪೂರ್ಣಗೊಳಿಸಿ ಬೇವು-ಬೆಲ್ಲ ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಮರುದಿನ ಸೋಮವಾರದಂದು ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ, ಮನೆಯ ಮಹಡಿಯ ಮೇಲೆ ನಿಂತು ಜನರು ಚಂದ್ರನನ್ನು ಹುಡುಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.  ಚಂದ್ರ ಅಲ್ಲಿ ಕಾಣುತ್ತಿದ್ದಾನೆ ಎಂದು ನೋಡಿದವರು ನೋಡದೇ ಇರುವವರಿಗೆ ತೋರಿಸಿ ಸಂಭ್ರಮಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಮನೆಗೆ ಬಂದು ಹಿರಿಯರ ಕಾಲಿಗೆ ನಮಸ್ಕರಿಸಿ ಭಕ್ತಿ ಮೆರೆದರು.

ಚಂದ್ರ ದರ್ಶನದ ನಂತರ ಸೋಮವಾರ ನಗರದ ಜೆ.ಸಿ.ಆರ್. ಬಡಾವಣೆಯ ಗಣಪತಿ ದೇವಸ್ಥಾನ, ತುರುವನೂರು ರಸ್ತೆಯ ಶ್ರೀ ವೆಂಕಟರಮಣ ದೇವಾಲಯ, ತಿಪ್ಪಜಿ ಸರ್ಕಲ್ ನ ಶ್ರೀ ವೆಂಕಟೇಶ್ವರ ದೇವಾಲಯ, ಕೆಳಗೋಟೆಯ ಗಣಪತಿ ದೇವಸ್ಥಾನ, ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ, ನಗರದ ಮಧ್ಯ ಭಾಗದಲ್ಲಿರುವ ನೀಲಕಂಠೇಶ್ವರ, ಬರಗೇರಮ್ಮ, ಕಣಿವೆ ಮಾರಮ್ಮ, ಏಕನಾಥೇಶ್ವರಿ, ಉತ್ಸವಾಂಬ, ಕೋಟೆ ಆಂಜನೇಯಸ್ವಾಮಿ ದೇವಾಲಯ, ಬೆಂಗಳೂರು ರಸ್ತೆಯ ಕಣಿವೆ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಪ್ರತಿ ದೇವಸ್ಥಾನದಲ್ಲೂ ವಿಶೇಷ ಪೂಜೆಗಳು ನಡೆದವು. ದೇಗುಲ ಹಾಗೂ ದೇವರಿಗೆ ಮಾಡಿದ್ದ ವಿಶೇಷ ಅಲಂಕಾರಗಳು ಗಮನ ಸೆಳೆಯುತ್ತಿದ್ದವು. ದೇವಸ್ಥಾನಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ನಂತರ ಪರಸ್ಪರ ಶುಭ ಕೋರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...