Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಪುಟಾಣಿಯ ಚಿಕಿತ್ಸೆಗೆ 16 ಕೋಟಿಯ ಅಗತ್ಯ ; ಕೈಜೋಡಿಸಿದ ಕಿಚ್ಚ ಸುದೀಪ್

---Advertisement---

ಬೆಂಗಳೂರು; ಮಕ್ಕಳೆಂದರೆ ಯಾವ ಪೋಷಕರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಾದ ಮೇಲೆ ಅವರ ಉಜ್ವಲ ಭವಿಷ್ಯಕ್ಕಾಗಿಯೇ ಹೋರಾಡುತ್ತಾರೆ. ಅವರ ಬಗ್ಗೆ ಹೆಚ್ಚಿನ ಕಾಳಜಿಯನ್ನ ತೋರುತ್ತಾರೆ. ಅನಾರೋಗ್ಯ ಕಾಡಿದರಂತು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಾರೆ. ವಾಸಿಯಾಗುವ ಕಾಯಿಲೆಯಾದರೆ ಸರಿ. ಆದರೆ ಕಾಯಿಲೆ ವಾಸಿಯಾಗೋದಕ್ಕೆ ಒಂದಲ್ಲ ಎರಡಲ್ಲ ಕೋಟಿ ಕೋಟಿ ರೂಪಾಯಿ ಬೇಕಾಗಬಹುದು ಎಂದಾಗ ಆ ಹೆತ್ತ ಪೋಷಕರ ಪರಿಸ್ಥಿತಿ ಏನಾಗಬಹುದು ನೀವೆ ಹೇಳಿ. ಜೀವನವನ್ನೇ ಬರುವ ಸಂಬಳದಲ್ಲಿ ನಡೆಸುವ ಪೋಷಕರಿಗೆ ಅತಿ ದುಬಾರಿಯಾದ ಕಾಯಿಲೆ ಎದುರಾದರೆ ದೇವರ ಮೇಲೆ ಭಾರ ಹಾಕಿ ಕೂರಬೇಕಾಗುತ್ತದೆ.

ಇಲ್ಲೊಂದು ಅಂಥದ್ದೇ ಘಟನೆ ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಮಗುವಿಗೆ ಬಹಳ ಅಪರೂಪದ ಕಾಯಿಲೆಯೊಂದು ಕಾಣಿಸಿಕೊಂಡಿದೆ. ಕೀರ್ತನಾ ಎಂಬ ಪುಟ್ಟ ಮಗುವಿಗೆ ಅಪರೂಪದ ಜೆನೆಟಿಕಲ್ ಡಿಸಾರ್ಡರ್ ಕಾಯಿಲೆ ಕಾಣಿಸಿಕೊಂಡಿದೆ. ಇದರಿಂದ ಮಗುವಿನ ಚಿಕಿತ್ಸೆಯೇ ದುಬಾರಿಯಾಗಿದೆ.

ಕೀರ್ತನಾ ತಂದೆ ಅರಣ್ಯ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡ್ತಾ ಇದಾರೆ. ಕಿಶೋರ್ ಎಂಬುವವರ ಪುತ್ರಿ ಕೀರ್ತನಾ. ಕಿಶೋರ್ ಈಗಾಗಲೇ ತಮ್ಮಿಡಿ ಆಸ್ತಿಯನ್ನ ಮಾರಿ ಮಗುವಿಗೆ ಟ್ರೀಟ್ಮೆಂಟ್ ಕೊಡಿಸಿದ್ದಾರೆ. 16 ಕೋಟಿ ಮೊತ್ತದ ಆ ಒಂದು ಮೆಡಿಸನ್ ಕೊಡಿಸಿದರೆ ಮಗು ಗುಣಮುಖರಾಗುವ ಎಲ್ಲಾ ಸಾಧ್ಯತೆ ಇದೆ. ಹೀಗಾಗಿ ಆ ಮಗುವಿನ ಪರವಾಗಿ ಕಿಚ್ಚ ಸುದೀಪ್ ಕೂಡ ನಿಂತಿದ್ದಾರೆ. ವಿಡಿಯೋ ಮಾಡಿ, ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ ಸುದೀಪ್ ತನ್ನ ಕೈಲಾದ ಸಹಾಯವನ್ನ ನಾನು ಮಾಡಿದ್ದೀನಿ. ನೀವೂ ಕೂಡ ನಿಮ್ಮ ಕೈಲಾದ ಸಹಾಯವನ್ನು ಮಾಡಿ ಎಂದು ಕೇಳಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment