Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಾಂತರ ಕಾಯ್ದೆ ಕೇವಲ ದುರುದ್ಧೇಶ : ಸಿದ್ದರಾಮಯ್ಯ ಕಿಡಿ

Facebook
Twitter
Telegram
WhatsApp

ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನಕ್ಕೆ ಹೋಗುವ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಶಾಸಕಿ ಅಂಜಲಿ ಲಿಂಬಾಳ್ಕರ್ ಜೊತೆ ಪಾದಯಾತ್ರೆಯಲ್ಲಿ ಗಮನ ಸೆಳೆದರು.

ಇದೇ ವೇಳೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಸಂವಿಧಾನದ ಪ್ರಕಾರ ಯಾರಾದರೂ ಒಂದು ಧರ್ಮವನ್ನು ಇಷ್ಟಪಟ್ಟು ಅನುಕರಣೆ ಮಾಡ್ತೀವಿ ಅಂದ್ರೆ ಅದಕ್ಕೆ ಅನುಮತಿ ಇದೆ. ಯಾರನ್ನು ಬಲವಂತವಾಗಿ ಮತಾಂತರ ಮಾಡಬಾರದು ಅಷ್ಟೆ ಎಂದಿದ್ದಾರೆ.

 

ಬಲವಂತವಾಗಿ ಮತಾಂತರ ಮಾಡಬಾರದು ಅಂತ ಇದೆ. ಹೀಗಿದ್ದರು ಈ ಕಾಯ್ದೆ ತರುವ ಅಗತ್ಯವೇನಿದೆ. ಬಿಜೆಪಿಯವರು ದುರುದ್ದೇಶದಿಂದ ಕಾಯ್ದೆ ಜಾರಿಗೆ ತರಲು ಹೊರಟಿದ್ದಾರೆ. ನಾವೂ ಇದಕ್ಕೆ ಒಪ್ಪಿಗೆ ನೀಡಲ್ಲ ಎಂದಿದ್ದಾರೆ.

ಇನ್ನು ಒಂದು ಸಮುದಾಯದ ಬಗ್ಗೆ ಕೈ ನಾಯಕರು ಮಾತನಾಡುತ್ತಿದ್ದಾರೆಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ, ನಾವೂ ಕೇವಲ ಒಂದು ಸಮುದಾಯ, ಧರ್ಮದ ಪರ ಇದ್ದೇವೆಂದು ಹೇಳುವುದು ಸರಿಯಲ್ಲ. ನಾವೂ ಎಲ್ಲರ ಪರವಾಗಿಯೂ ಇದ್ದೇವೆ. ಜಾತ್ಯತೀತತೆಯ ಬಗ್ಗೆ ನಂಬಿಕೆ ಇಟ್ಟವರು. ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಅವರ ಪರ ಮಾತಾಡುತ್ತೇವೆ. ಪ್ರವಾಹದ ಬಗ್ಗೆ ಮಾತಾಡುತ್ತೇವೆ. ಪರ್ಸಂಟೇಜ್ ಬಗ್ಗೆಯೂ ಮಾತಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!