Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ.ದೇವೇಗೌಡ ಬೆಂಬಲ..!

---Advertisement---

 

ದೇಶದಲ್ಲಿ ಸದ್ಯಕ್ಕೆ ವಕ್ಫ್ ಮಸೂದೆಯದ್ದೇ ಸದ್ದು. ಇದೀಗ ವಕ್ಫ್ ತಿದ್ದುಪಡಿ ಮಸೂದೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕೂಡ ಬೆಂಬಲ ನೀಡಿದ್ದಾರೆ. ವಕ್ಫ್ ಮಸೂದೆಯು ಮುಸ್ಲಿಂ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ದೇವೇಗೌಡ ಅವರು ಪ್ರತಿಪಾದಿಸಿದ್ದಾರೆ.

ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು 1.2 ಲಕ್ಷ ಕೋಡಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಂರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ. ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಯನ್ನು ನಿಯಂತ್ರಿಸುತ್ತದೆ. ಅದರ ಮೌಲ್ಯ 1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೇವೇಗೌಡರು ಉಲ್ಲೇಖಿಸಿದ್ದಾರೆ.

 

ನಾವೂ ಜಾತ್ಯಾತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ. ವಜ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ವಿಧೇಯಕವೂ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲ ಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment