Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ಆಸ್ತಿ ಕರ್ನಾಟಕದಲ್ಲಿ ಎಷ್ಟಿದೆ ಗೊತ್ತಾ..?

---Advertisement---

ವಕ್ಫ್ ತಿದ್ದುಪಡಿ ಮಸೂದೆ ವಿಧೇಯಕ 2025 ಅಂಗೀಕಾರಗೊಂಡಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಬಹು ಚರ್ಚಿತ ಹಾಗೂ ವಿವಾದಿತ ವಿಧೇಯಕಕ್ಕೆ ಸಂಸತ್ ಅನುಮೋದನೆಯ ಮುದ್ರೆ ಒತ್ತಿದೆ. ಬಜೆಟ್ ಅಧಿವೇಶನ ಅಂತ್ಯವಾಗುವ ಒಂದು ದಿನ ಮೊದಲು ಸಂಸತ್ ಉಭಯ ಸದನದಲ್ಲಿ ಅಂಗೀಕಾರಗೊಂಡಿರುವ ವಿಧೇಯಕ ರಾಷ್ಟ್ರಪತಿಗಳ ಅಂಕಿತದ ಬಳಿಕ ಕಾಯ್ದೆಯಾಗಿ ಜಾರಿಗೆ ಬರಲಿದೆ. ವಕ್ಫ್ ಆಸ್ತಿಗಳ ನಿರ್ವಹಣೆ, ಮೇಲ್ವಿಚಾರಣೆ, ಸುಧಾರಣೆ, ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವ ಜೊತೆಗೆ ಹಳೆಯ ಕಾಯ್ದೆಯಲ್ಲಿದ್ದ ಕೆಲವು ವಿವಾದಾತ್ಮಕ ಅಂಶಗಳನ್ನು ತಿದ್ದುಪಡಿ ವಿಧೇಯಕದಲ್ಲಿ ತೆಗೆದು ಹಾಕಲಾಗಿದೆ.

 

ದೇಶದಲ್ಲಿ ವಕ್ಫ್ ಆಸ್ತಿ ಸುಮಾರು 8.72 ಲಕ್ಷ ವಕ್ಫ್ ಆಸ್ತಿಗಳಿವೆ. ಇವುಗಳ ವಿಸ್ತೀರ್ಣ 38 ಲಕ್ಷ ಎಕರೆಗಳಿಗಿಂತಲೂ ಹೆಚ್ಚು. ವಕ್ಫ್ ಮ್ಯಾನೇಜ್ಮೆಂಟ್ ಸಿಸ್ಟಮ್ ಆಫ್ ಇಂಡಿಯಾ ಪೋರ್ಟಲ್ ನಲ್ಲಿಯೇ ಈ ಮಾಹಿತಿ ಲಭ್ಯವಿದೆ. ಉತ್ತರ ಪ್ರದೇಶದಲ್ಲಿ ಹೆಚ್ಚು ಆಸ್ತಿ ಇದೆ. ಪಶ್ಚಿಮ ಬಂಗಾಳದಲ್ಲಿ 80,480, ಪಂಜಾಬ್ ನಲ್ಲಿ 75,965, ತಮಿಳುನಾಡಿನಲ್ಲಿ 66,092 ಇದೆ.

ಕರ್ನಾಟಕದಲ್ಲಿಯೂ ವಕ್ಫ್ ಆಸ್ತಿ ಕಡಿಮೆ ಏನು ಇಲ್ಲ. 62,830 ವಕ್ಫ್ ಆಸ್ತಿಗಳು ಇದಾವೆ. ವಕ್ಫ್ ಆಸ್ತಿ ಹೊಂದಿರುವುದರಲ್ಲಿ ನಮ್ಮ ಕರ್ನಾಟಕ ಐದನೇ ಸ್ಥಾನವನ್ನು ಹೊಂದಿದೆ. ಕರ್ನಾಟಕದಲ್ಲಿ 5.96 ಲಕ್ಷ ಎಕರೆ ವಕ್ಫ್ ಜಮೀನು ಇದೆ. ಆದರೆ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವುದೇ ಉತ್ತರ ಪ್ರದೇಶದಲ್ಲಿ. ವಕ್ಫ್ ಮಂಡಳಿ ಬಳಿ ಆಸ್ತಿ ಎಷ್ಟಿದೆ ಎಂಬುದರ ವಿವರ ಮಾತ್ರ ಲಭ್ಯವಾಗಿಲ್ಲ. ಸದ್ಯ ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸರ್ಕಾರದಿಂದ ಸಂಸತ್ ನಲ್ಲಿ ಅಂಗೀಕಾರ ಸಿಕ್ಕಿದೆ. ರಾಜ್ಯಸಭೆಯಲ್ಲೂ ಅಂಗೀಕಾರ ಸಿಕ್ಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment