ಬೇಸಿಗೆ ಇನ್ನು ಮುಗಿದಿಲ್ಲ. ಆದರೆ ಆಗಲೇ ಮಳೆ ಶುರುವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಣ್ಣನೆಯ ಗಾಳಿ ಬೀಸಿದಂತಾಗಿದೆ. ಇನ್ನು ಮಳೆರಾಯ ನಾಳೆಯೂ ದರ್ಶನ ಕೊಡಲಿದ್ದಾನೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು – ಬಿರುಗಾಳಿ ಹಾಗೂ ಮಳೆಯ ಅಬ್ಬರ ಶುರುವಾಗಿದೆ. ಇದಕ್ಕೆಲ್ಲಾ ಕಾರಣ ಚಂಡಮಾರುತ. ತಮಿಳುನಾಡು ಹಾಗೂ ನೆರೆಹೊರೆಗಳಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಇದೆ. ಇನ್ನೊಂದೆಡೆ ದಕ್ಷಿಣ ಅಂಡಮಾನ್ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆ ಇದೆ. ಹೀಗಾಗಿ ರಾಜ್ಯದ ಹಕವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ವಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಬೇರೆ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿನೆ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಕ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಇನ್ನು ನಾಳೆಯಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ. ಏಪ್ರಿಲ್ 5ರ ತನಕ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಹಗುರವಾದ ಮಳೆಯಾಗಲಿದೆ. ಆದರೂ ಹೊರಗೆ ಹೋಗುವವರು ಕೊಂಚ ಎಚ್ಚರದಿಂದ ಇರುವುದು ಒಳಿತು. ಮುಂಜಾಗ್ರತ ಕ್ರಮವಾಗಿ ಕೊಡೆಯನ್ನ ತೆಗೆದುಕೊಂಡು ಹೋಗಿ. ವಾಹನ ಸವಾರರಂತು ಬಹಳಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಯಾವಗ ಮಳೆಯಾಗಲಿದೆ ಅನ್ನೋದೆ ತಿಳಿಯುವುದಿಲ್ಲ. ಹೀಗಾಗಿ ಮಳೆಯಿಂದ ಬಚಾವ್ ಆಗುವುದಕ್ಕೆ ಸಾಧ್ಯವಾದಷ್ಟು ರೇನ್ ಕೋಟ್ ಎಲ್ಲಾ ತೆಗೆದುಕೊಂಡು ಹೋಗಿ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











