Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೃಜನಶೀಲ ಯುವ ಬರಹಗಾರರಿಗೆ ಆರ್ಥಿಕ ನೆರವು ನೀಡಿ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 04 : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸುತ್ತ ಮುತ್ತಲಿನ ಸೃಜನಶೀಲ ಯುವ ಬರಹಗಾರರಿಗೆ ಆರ್ಥಿಕ ನೆರವು ನೀಡಿ ಅವರನ್ನು ಸಾಂಸ್ಕೃತಿಕವಾಗಿ ಬೆಳೆಸುವ ನೈತಿಕ ಜವಾಬ್ದಾರಿ ನಾಡಿನ ಚಿಂತಕರ ಮೇಲಿದೆ ಎಂದು ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಅಭಿಪ್ರಾಯಪಟ್ಟರು.

ನಗರದ ಹೆಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲೇಖಕಿ ಎಸ್.ಪಾರಿಜಾತರವರ ಸನೂತನ ವಿಮರ್ಶಾಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನೆರವಿನಹಸ್ತ ನೀಡುವುದರಿಂದ ಬರಹಗಾರರಲ್ಲಿ ಮಾನಸಿಕ ಶಕ್ತಿ ಹೆಚ್ಚುವುದಲ್ಲದೆ ಹಲವು ಉತ್ತಮ ಸಾಹಿತ್ಯ ಕೃತಿಗಳ ರಚಿಸಲು ಸಾಧ್ಯವಾಗುತ್ತದೆ.

ಆಕರ್ಷಕ ಮೊಬೈಲ್ ಹೆಚ್ಚು ಬಳಕೆ ಮಾಡುವುದರಿಂದ ಅದು ಮನಸ್ಸು ತೀರಾ ದುರ್ಬಲಗೊಳಿಸುತ್ತದೆ. ಹೀಗಾಗಿ ಕನ್ನಡದ ಉತ್ಕೃಷ್ಟ ಕೃತಿಗಳನ್ನು ಓದುವ ಸದಾಭಿರುಚಿ ಬೆಳೆಸಿಕೊಂಡು ನಾಡಿನ ಶ್ರೇಷ್ಠ ಚಿಂತಕರಾಗಿ ರೂಪುಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಬಂಡಾಯ ಸಾಹಿತಿ ಪ್ರೊ.ಸಿ.ಶಿವಲಿಂಗಪ್ಪ ಮಾತನಾಡಿ, ಸೀತೆಯ ಅಪಮಾನ ಖಂಡಿಸುವ ಗುಣ ಜಾನಪದ ರಾಮಾಯಣದಲ್ಲಿ ಇದೆ. ಮತ್ತು ಸಂಸ್ಕೃತಿಯ ಸೂಕ್ಷö್ಮ ಚಿಂತನೆಯಿಂದ ದೇಶದ ಧರ್ಮಾಂಧತೆ ದೂರ ಮಾಡಿಕೊಳ್ಳುವ ಅಂಶಗಳು ಸನೂತನ ಕೃತಿಯಲ್ಲಿ ಕಂಡು ಬರುತ್ತವೆ.

ಸಾಮಾಜಿಕ ಜಾಲತಾಣದಲ್ಲಿ ಮುಳಗಿ ಛಿದ್ರೀಕರಣದ ಚಂಚಲತೆಯಲ್ಲಿ ತೇಲುವ ಬದಲಿಗೆ ವಿದ್ಯಾರ್ಥಿಗಳು ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಖ್ಯಾತ ಕಥೆಗಾರ ತಿಪ್ಪಣ್ಣ ಮರಿಕುಂಟೆ ಮಾತನಾಡಿ, ಘಾಸಿಗೊಂಡ ಬದುಕಿಗೆ ಬಲ ತಂದು ಕೊಡುವುದು ಸಾಹಿತ್ಯ.
ಪ್ರಕೃತಿಯಲ್ಲಿನ ಗಿಡ, ಮರ, ಪಕ್ಷಿಗಳ ಚಲನೆಯನ್ನು ಆಲಿಸುವ ಮನಸ್ಥಿತಿ ಸಾಹಿತ್ಯ ರಚನೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.

ಪ್ರಾಂಶುಪಾಲ ಪ್ರೊ.ಬಿ.ಎಸ್. ಮಂಜುನಾಥ, ಲೇಖಕಿ ಎಸ್.ಪಾರಿಜಾತ, ಕನ್ನಡ ಪ್ರಾಧ್ಯಾಪಕ ಪ್ರೊ.ಜಿ.ವಿ.ರಾಜಣ್ಣ ಮಾತನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಶಿವನಂದಯ್ಯ, ಇತಿಹಾಸ ಪ್ರಾಧ್ಯಾಪಕ ಪ್ರೊ.ಕೆ.ಜೆ.ಆರ್.ರಾಜಕುಮಾರ್, ಕನ್ನಡ ಪ್ರಾಧ್ಯಾಪಕ ಪ್ರೊ.ಕೆ.ಚಿತ್ತಯ್ಯ, ಪ್ರೊ.ಎ.ಎಸ್.ಸತೀಶ್, ಪ್ರೊ. ಎಂ.ಮುರಳಿ, ಸಮಾಜಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಎಂ.ಕೆ.ದೇವಪ್ಪ, ಗ್ರಂಥಪಾಲಕ ಎಸ್.ಪಾಪಣ್ಣ ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...