Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿಯತೆ ನಿರ್ಮೂಲನೆಯಾಗುವತನಕ ಭಾರತದ ಉದ್ದಾರ ಸಾಧ್ಯವಿಲ್ಲ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 05 : ಭಾರತದ ಹಿರಿಮೆ, ಗರಿಮೆ, ಉತ್ಕøಷ್ಟತೆಯನ್ನು ಹೊರ ದೇಶಗಳಲ್ಲಿ ಹೊಗಳಿರುವ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಎಂದ ಕೂಡಲೆ ಎಲ್ಲರಿಗೂ ಒಂದು ರೀತಿಯ ಹುರುಪು, ಹುಮ್ಮಸ್ಸು ಸಂಚಲನವಾಗುತ್ತದೆಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಶ್ರೀಪಾದ ದೀಕ್ಷಿತ್ ತಿಳಿಸಿದರು.

ವರ್ತಮಾನದ ಸನ್ನಿವೇಶದಲ್ಲಿ ಯುವಕರ ಬಗೆಗಿನ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಬಗ್ಗೆ ಸರಸ್ವತಿ ಕಾನೂನು ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ಭಾಷಣ ಮಾಡಿದ ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಬೇರೆ ದೇಶಗಳಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದರು. ಭಾರತವೆಂದರೆ ಜ್ಞಾನದ ನಾಡು ಎನ್ನುವುದು ಅವರ ಪರಿಕಲ್ಪನೆಯಾಗಿತ್ತು. ತುಂಬಾ ಬಡತನದ ಕುಟುಂಬ ಅವರದು. ಜಾತಿಯತೆ ನಿರ್ಮೂಲನೆಯಾಗುವತನಕ ಭಾರತದ ಉದ್ದಾರ ಸಾಧ್ಯವಿಲ್ಲ ಎಂದು ವಿವೇಕಾನಂದರು ಹೇಳಿದ್ದನ್ನು ಸ್ಮರಿಸಿಕೊಂಡ ನ್ಯಾಯಾಧೀಶ ಕೃಷ್ಣ ಶ್ರೀಪಾದ ದೀಕ್ಷಿತ್‍ರವರು ರಾಮಾಯಣ, ಮಹಾಭಾರತ, ಸಂವಿಧಾನವನ್ನು ಕೊಡುಗೆಯಾಗಿ ಕೊಟ್ಟವರು ಮೇಲ್ಜಾತಿಯವರಲ್ಲ ಎನ್ನುವ ಜಾಗೃತಿ ಎಲ್ಲರಲ್ಲಿಯೂ ಇರಬೇಕೆಂದರು.

 

ವಿಕ್ರಮಾದಿತ್ಯನಿಗೆ ಸಲಹೆ ಕೊಟ್ಟವನು ಕಾಳಿದಾಸ. ಹತ್ತು ಉಪನಿಷತ್ತುಗಳಲ್ಲಿ ಮೂರ್ನಾಲ್ಕು ಉಪನಿಷತ್ತುಗಳನ್ನು ಕೊಟ್ಟವರು ಕೆಳಜಾತಿಯವರು. ಸನಾತನ ಧರ್ಮ ಭಾರತೀಯರಿಗೆ ಪೂರಕವಾಗಿದೆ ಎನ್ನುವುದು ಸ್ವಾಮಿ ವಿವೇಕಾನಂದರವರ ಆಶಯವಾಗಿತ್ತು. ಸನಾತನ ಧರ್ಮಕ್ಕೆ ತನ್ನದೆ ಆದ ವೈಶಿಷ್ಠ್ಯತೆಯಿದೆ. ಹಾಗಾಗಿ ಧರ್ಮ ಉಳಿಸಲು ಪ್ರಯತ್ನಿಸುತ್ತೇನೆ. ಮನುಷ್ಯ ತನ್ನಲ್ಲಿರುವ ಕೀಳರಿಮೆಯನ್ನು ಬಿಡಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಉತ್ಕøಷ್ಟವಾದ ಚಿಂತನೆ ಅವರದು. ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅತ್ಯಂತ ಕೆಳ ಸಮುದಾಯದವರು. ಜಾತಿ ನಿರ್ಮೂಲನೆ ಅವರ ಉದ್ದೇಶವಾಗಿತ್ತು. ಆದರೆ ಇಂದಿಗೂ ಜಾತಿ ತಾರತಮ್ಯ ನಿವಾರಣೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ವಾಮಿ ವಿವೇಕಾನಂದರ ಬರವಣಿಗೆ, ಪ್ರವಚನಕ್ಕೆ ಮಹಾತ್ಮಗಾಂಧಿ ಕೂಡ ಪ್ರಭಾವಿತರಾಗಿದ್ದರು. ಮೋತಿಲಾಲ್ ನೆಹರುಗೆ ಭಾರತದ ಮೇಲೆ ಪ್ರೀತಿಯಿತ್ತು. ಜಾತಿಯತೆ, ಮೌಢ್ಯ ನಮ್ಮ ದೇಶದಲ್ಲಿದ್ದರೂ ಭಾರತ ಒಂದು ಅನುಭೂತಿ. ಅನೇಕರು ಈ ದೇಶಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಭಾರತ ಪುಣ್ಯ ಭೂಮಿ ಎಂದು ಹೇಳಿರುವ ಸ್ವಾಮಿ ವಿವೇಕಾನಂದರವರಲ್ಲಿದ್ದ ಚಿಂತನೆ ಎಲ್ಲರ ಜೀವನದಲ್ಲಿ ಹಾಸು ಹೊಕ್ಕಾಗಬೇಕು. ಪ್ರಖರ ವಾಗ್ಮಿ, ಜ್ಞಾನಿಯಾಗಿದ್ದ ಸ್ವಾಮಿ ವಿವೇಕಾನಂದರು ಯುವ ಜನಾಂಗದ ಮೇಲೆ ಅಪಾರವಾದ ವಿಶ್ವಾಸ ನಂಬಿಕೆಯಿಟ್ಟುಕೊಂಡಿದ್ದರು. ಅದಕ್ಕಾಗಿ ಯುವ ಜನಾಂಗ ತಪ್ಪು ಕಲ್ಪನೆ ತಲೆಯಲ್ಲಿ ಸೇರಲು ಅವಕಾಶ ಕೊಡಬಾರದು. ಒಂದು ದಿನಕ್ಕೆ 106 ಸೆಟಲೈಟ್‍ಗಳನ್ನು ಅಂತರಿಕ್ಷಕ್ಕೆ ಹಾರಿ ಬಿಟ್ಟ ದೇಶ ನಮ್ಮದು ಎನ್ನುವ ಪ್ರೌಢಿಮೆ ಇರಬೇಕು. ಕೋವಿಡ್‍ನಲ್ಲಿ ಬೇರೆ ದೇಶಗಳಿಗೆ ಔಷಧಿಯನ್ನು ಕಳಿಸಿ ಪ್ರಾಣ ಉಳಿಸಿದ ಹೆಗ್ಗಳಿಕೆ ಭಾರತಕ್ಕಿದೆ ಎಂದು ಹೇಳಿದರು. ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷರಾದ ಹೆಚ್.ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಸಿ.ಬಸವರಾಜು, ನಿವೃತ್ತ ನ್ಯಾಯಮೂರ್ತಿ ಹೆಚ್.ಬಿಲ್ಲಪ್ಪ, ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಪ್ರತಾಪ್ ಲಿಂಗಯ್ಯ, ಸರಸ್ವತಿ ಕಾನೂನು ಕಾಲೇಜು ಉಪಾಧ್ಯಕ್ಷರುಗಳಾದ ಫಾತ್ಯರಾಜನ್, ಡಿ.ಕೆ.ಶೀಲಾ, ಎನ್.ಎಸ್.ಎಸ್.ಕೋ-ಆರ್ಡಿನೇಟರ್ ಐ.ಬಿ.ಬೀರಾದರ್, ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ ಇವರುಗಳು ವೇದಿಕೆಯಲ್ಲಿದ್ದರು. ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರುಗಳು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...