Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊಂಡಜ್ಜಿ ಕೆರೆಯನ್ನು ಪ್ರವಾಸಿ ತಾಣವಾಗಿಸಲು ಕ್ರಮ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

---Advertisement---

 

 

ದಾವಣಗೆರೆ, ಏ.05: ಜಿಲ್ಲೆಯಲ್ಲಿನ ಆರು ತಾಲ್ಲೂಕಿನಲ್ಲಿನ ಪ್ರಮುಖ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಪ್ರವಾಸಿ ತಾಣಗಳಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

 

ಅವರು ಶನಿವಾರ ಕೊಂಡಜ್ಜಿ ಕೆರೆಯಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಹಾಗೂ ಬಾಲಕಿಯರಿಗೆ ಏರ್ಪಡಿಸಲಾದ ಜಲಸಾಹಸ ಕ್ರೀಡೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದರು.
ಮಹಿಳಾ ದಿನಾಚರಣೆಯ ಪ್ರಯುಕ್ತ ಕೆರೆಯಲ್ಲಿ ಮಹಿಳೆಯರಿಗಾಗಿ ಏಪ್ರಿಲ್ 7 ರವರೆಗೆ ಉಚಿತವಾಗಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯು ಕ್ರೀಡೆಗೆ ಪ್ರಸಿದ್ದಿ. ಹಾಗಾಗಿ ಮಹಿಳೆಯರನ್ನು ಕ್ರೀಡಾ ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ದೃಷ್ಟಿಯಿಂದ ಇದನ್ನು ಪ್ರವಾಸಿ ತಾಣವಾಗಿಸಿ, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳ  ತರಬೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಅಷ್ಟೇ ಅಲ್ಲದೇ ಮಹಿಳಾ ದಿನಾಚರಣೆಯ ಪ್ರಯುಕ್ತ ಸ್ಪರ್ಧೆಗಳನ್ನು ಆಯೋಜಿಸಿ, ಸ್ಪರ್ಧೆಯಲ್ಲಿ ಜಯಗಳಿಸಿದ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲೆಯ  ಚನ್ನಗಿರಿ, ಹರಿಹರ ಮುಂತಾದ ಕ್ಷೇತ್ರಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿ ತಾಣಗಳನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

 

ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಜಲ ಸಹಾಸ ಕ್ರೀಡೆಯಲ್ಲಿ ಭಾಗವಹಿಸದ ಸಂತೋಷದ ಕ್ಷಣ ಹಾಗೂ ಅನುಭವಗಳ ಕುರಿತು ಮಾಹಿತಿ ಪಡೆದರು. ನಾನು ಹಿಟ್ಟಿದ ಗ್ರಾಮ ಕಕ್ಕರಗೊಳ್ಳವಾಗಿದ್ದು ತಾಲ್ಲೂಕು ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ ಕಾರ್ಯಕ್ರಮದಲ್ಲಿ ಕೊಂಡಜ್ಜಿಯಲ್ಲಿ ಭಾಗವಹಿಸಲಾಗಿತ್ತು. ಕೊಂಡಜ್ಜಿ ಕರೆಯಲ್ಲಿ ಜಲಸಾಹಸ ಕ್ರೀಡೆಗಳ ತರಬೇತಿಯನ್ನು ನೀಡಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment