Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಮಲ್ಲಯ್ಯ ನಿಧನ

---Advertisement---

ಚಿತ್ರದುರ್ಗ, ಏ, 07 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಏಜೆಂಟರಾಗಿ ಶಾಖಾ ಹಾಗೂ ಖಾಸಮಠಗಳ ಸಂಪರ್ಕ ಮತ್ತು ಅವುಗಳ ಕೋರ್ಟ್ ಕೆಲಸಗಳನ್ನು ನಿರ್ವಹಿಸಿದ ಹಾಗೂ ಚಿತ್ರದುರ್ಗದ ಶ್ರೀ ಜಯದೇವ ವಿದ್ಯಾರ್ಥಿನಿಲಯದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದ ಎಸ್. ಮಲ್ಲಯ್ಯನವರು ಮಠದಕುರುಬರಹಟ್ಟಿಯ ಅವರ ನಿವಾಸದಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಜಯದೇವ ಹಾಸ್ಟೆಲ್ ಮೆನೇಜರ್ ಅಗಿ ಸುಮಾರು 30-40 ವರ್ಷಗಳು, ಕಾಲ ಸೇವೆ ಸಲ್ಲಿಸಿದ್ದರು. ಈ ಕಾರಣದಿಂದಾಗಿ ಅವರು ‘ಮ್ಯಾನೇಜರ್ ಮಲ್ಲಯ್ಯ’ ಎಂದೇ ಹೆಸರಾಗಿದ್ದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಮೃತರ ಅಂತಿಮ ದರ್ಶನ ಪಡೆದರು.

ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮಿಗಳು, ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು, ಅಥಣಿ ಗಚ್ಚಿನಮಠದ ಶ್ರೀ ಶಿವಬಸವಸ್ವಾಮಿಗಳು, ಶ್ರೀ ಮರುಳಸಿದ್ದ ಸ್ವಾಮಿಗಳು ಶೆಟ್ಟರಮಠ ಅಥಣಿ, ಶ್ರೀ ಗುರುಲಿಂಗ ಸ್ವಾಮಿಗಳು, ಅಕ್ಕಿಮಠ, ಅಗಡಿ, ಎರೆಬೂದಾಳಿನ ಶ್ರೀ ಪ್ರಭುಸ್ವಾಮಿಗಳು ಸೇರಿದಂತೆ ಅವರೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ನಾಡಿನ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಚಿತ್ರದುರ್ಗ ನಗರದ ವೀರಶೈವ ಲಿಂಗಾಯತ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...