ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇನ್ನೇನು ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿದೇ ಬಿಡುತ್ತಾರೆ ಎಂಬೆಲ್ಲಾ ರೀತಿ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಆದರೆ ಆ ವಿಚಾರ ಅಲ್ಲಿಗಲ್ಲಿಗೆ ನಿಂತಿದೆ. ಇದೀಗ ಕೋಡಿಮಠದ ಸ್ವಾಮಿಗಳು ಸಿಎಂ ಸ್ಥಾಮದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ಮೊನ್ನೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡುತ್ತಿದ್ದೆ. ಉತ್ತರ ಕರ್ನಾಟಕದಿಂದ ಯಾರಾದರೂ ಸಿಎಂ ಆದರೆ ಎಂಬಿ ಪಾಟೀಲ್ ಆಗಲಿ ಎಂದೆ ಎಂದು ಹೇಳಿದರು. ಈ ಮಾತನ್ನು ಕೇಳಿಸಿಕಿಂಡ ಎಂಬಿ ಪಾಟೀಲ್ ಖುಷಿ ಪಟ್ಟರು.
ಒಂದೇ ವೇದಿಕೆಯಲ್ಲಿ ಸಚಿವ ಎಂಬಿ ಪಾಟೀಲ್ ಹಾಗೂ ಕೋಡಿಮಠದ ಶಿವಯೋಗಿ ಶಿವಾನಂದ ಸ್ವಾಮೀಜಿಗಳು ಇದ್ದರು. ಸ್ವಾಮೀಜಿಗೆ ತನ್ನ ಮೇಲೆ ಇರುವ ಆತ್ಮೀಯತೆಗೆ ಖುಷಿ ಪಟ್ಟರು. ಸಿಎಂ ಸ್ಥಾನದಲ್ಲಿ ತನ್ನನ್ನು ನೋಡಲು ಇಚ್ಛಿಸುತ್ತಿದ್ದಾರೆ ಎಂಬ ಖುಷಿ ಅವರಲ್ಲಿ ಕಂಡಿತ್ತು. ಇನ್ನು ಸಿಎಂ ವಿಚಾರಕ್ಕೇನೆ ಕಳೆದ ಬಾರಿಯೂ ಕೋಡಿ ಮಠದ ಶ್ರೀಗಳ ಭವಿಷ್ಯ ಸದ್ದು ಮಾಡಿತ್ತು. ಈ ಬಾರಿ ಮಹಿಳೆ ಸಿಎಂ ಆಗ್ತಾರೆ ಎಂಬ ಭವಿಷ್ಯ ನುಡಿದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಬಂದಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















