Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ದ್ವಿತೀಯ ಪಿಯುಸಿ ಫಲಿತಾಂಶ ; ಎಷ್ಟು ಗಂಟೆಗೆ ಸಿಗಲಿದೆ ರಿಸಲ್ಟ್..?

---Advertisement---

ಬೆಂಗಳೂರು; ಪರೀಕ್ಷೆ ಬರೆದು ಫಲಿತಂಶಕ್ಕಾಗಿ ಕಾಯುತ್ತಿರುವ ದ್ವಿತೀಯ ಪಿಯುಸಿ ಮಕ್ಕಳಿಗೆ ಇಂದು ಢವಢವ ಶುರುವಾಗಿದೆ. ಎಷ್ಟೇ ಚೆನ್ನಾಗಿ ಬರೆದಿದ್ದರು, ನಿರೀಕ್ಷೆ ಏನೇ ಇದ್ದರು ಫಲಿತಾಂಶ ನೋಡುವ ತನಕ ಮಕ್ಕಳಲ್ಲಿ ಆತಂಕ ಇದ್ದದ್ದೆ. ಕೇವಲ ಮಕ್ಕಳಲ್ಲಿ ಮಾತ್ರವಲ್ಲ ಪೋಷಕರಲ್ಲೂ ಫಲಿತಾಂಶದ ಆತಂಕ ಇರುತ್ತದೆ. ಇಂದು ಮಧ್ಯಾಹ್ನ ಪಿಯುಸಿ ಫಲಿತಾಂಶ ಹೊರ ಬೀಳಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಧ್ಯಾಹ್ನ 1.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯ ನಂತರವಷ್ಟೆ ಫಲಿತಾಂಶವನ್ನು ಚೆಕ್ ಮಾಡಬಹುದು. ಶಿಕ್ಷಣ ಮಂಡಳಿ ವೆಬ್ಸೈಟ್ ನಲ್ಲೂ ಚೆಕ್ ಮಾಡಬಹುದು. https://karresults.nic.in ಈ ವೆಬ್ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. ಅದಕ್ಕೂ ಮುನ್ನ ಮೊಬೈಲ್ ನಂಬರ್ ಗೆ ಫಲಿತಾಂಶ ಸಿಗಲಿದೆ.

ಮಾರ್ಚ್ 1 ರಿಂದ 20ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ಕ್ಕೆ 7.13 ಲಕ್ಷ ವಿದ್ಯಾರ್ಥಿಗಳು ರಿಜಿಸ್ಟ್ರೇಷನ್‌ ಮಾಡಿಕೊಂಡು, ಪರೀಕ್ಷೆ ಬರೆದಿದ್ದಾರೆ. ಮಂಡಲಿಯ ವೆಬ್‌ಸೈಟ್‌ ಲಿಂಕ್ http://www.karresults.nic.in/#a ಗೆ ಭೇಟಿ ನೀಡಿ.
– ತೆರೆದ ವೆಬ್‌ಪೇಜ್‌ನಲ್ಲಿ ‘2nd PUC Main Examination 1 Results’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
– ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
– ಇಲ್ಲಿ ಮೊದಲಿಗೆ ದ್ವಿತೀಯ ಪಿಯುಸಿ ರಿಜಿಸ್ಟರ್‌ ನಂಬರ್ ಟೈಪಿಸಿ.
– ನಂತರ ಕಾಂಬಿನೇಷನ್‌ ಆಯ್ಕೆ ಮಾಡಿ.
– ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
– ಫಲಿತಾಂಶ ಶೀಟ್‌ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment