Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮನವಮಿ ಪ್ರಯುಕ್ತ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಕೋಟಿ ಗೊತ್ತಾ ?

---Advertisement---

 

ಸುದ್ದಿಒನ್ : ಮಹಾರಾಷ್ಟ್ರ: ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಾಲಯಕ್ಕೆ ದಾಖಲೆಯ ಆದಾಯ ಬಂದಿದೆ. ಈ ತಿಂಗಳ 5 ರಿಂದ 7 ರವರೆಗೆ ನಡೆದ ಶ್ರೀ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ, ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ಗೆ (SSST) ಒಟ್ಟು 4.26 ಕೋಟಿ ದೇಣಿಗೆ ಸಂಗ್ರಹವಾಗಿದೆ.

ಸಂಗ್ರಹವಾದ ಒಟ್ಟು ದೇಣಿಗೆಯಲ್ಲಿ ರೂ. 1.67 ಕೋಟಿ ರೂಪಾಯಿ ನಗದು ರೂಪದಲ್ಲಿ ಸಂಗ್ರಹವಾಗಿದೆ. ಇದರಲ್ಲಿ ದೇಣಿಗೆ ಕೌಂಟರ್‌ಗಳ ಮೂಲಕ 79.38 ಲಕ್ಷ ರೂ.ಗಳು, ದರ್ಶನ ಪಾಸ್‌ಗಳಿಂದ 47.16 ಲಕ್ಷ ರೂಪಾಯಿಗಳು ಬಂದಿವೆ. ಇವುಗಳ ಜೊತೆಗೆ, 6.15 ಲಕ್ಷ ರೂ. ಮೌಲ್ಯದ 83 ಗ್ರಾಂ ಚಿನ್ನ, 1.31 ಲಕ್ಷ, ರೂ. ಮೌಲ್ಯದ 2 ಕೆಜಿ ಬೆಳ್ಳಿ ದೇಣಿಗೆ ರೂಪದಲ್ಲಿ ಸಂಗ್ರಹವಾಗಿದೆ. ಈ ಶ್ರೀ ರಾಮ ನವಮಿಯ ಸಂದರ್ಭದಲ್ಲಿ, ಕೇವಲ ಮೂರು ದಿನಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಭಕ್ತರು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ ಹಲವಾರು ಭಕ್ತರು ಪ್ರಾರ್ಥನೆ ಸಲ್ಲಿಸಲು ಬರುತ್ತಾರೆ. ಸಾಯಿಬಾಬಾ ಅವರನ್ನು ರಾಮನ ಪುನರ್ಜನ್ಮ ಎಂದು ನಂಬಲಾಗಿದೆ. ಆದ್ದರಿಂದ ರಾಮ ನವಮಿಯ ದಿನದಂದು ಭಕ್ತರು ಸಾಯಿಬಾಬಾ ದರ್ಶನ ಮತ್ತು ಆಶೀರ್ವಾದವನ್ನು ಪಡೆಯುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...