ಬೆಂಗಳೂರು; ಜಾತಿ ಗಣತಿ ವರದಿಗೆ ಮೊದಲಿನಿಂದಾನೂ ಪರ – ವಿರೋಧ ಇದ್ದದ್ದೆ. ಇದೀಗ ವರದಿಯೂ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ. ಶಾಮನೂರು ಶಿವಶಂಕರಪ್ಪ ಅವರು ವರದಿಯನ್ನು ವಿರೋಧಿಸಿದ್ದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವೂ ಯಾಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದನ ಪ್ರಕಾರವಾಗಿ ಅವರುಗಳು ತಮ್ಮ ನಿಲುವನ್ನು ಪ್ರತಿಪಾದನೆ ಮಾಡಲಿ ಎಂದಿದ್ದಾರೆ.
ಮುಖ್ಯಮಂತ್ರಿಗಳು ಜಾತಿ ಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ಮಾಡಲು ಸಾಧ್ಯ ಎಂದಿದ್ದಾರೆ. ಇದೇ ವೇಳೆ ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯದ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನನ್ನ ಕರ್ತವ್ಯ. ಧ್ವನಜ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ.
ಸದ್ಯಕ್ಕೆ ಜಾತಿ ಗಣತಿ ವರದಿ ಬಹಿರಂಗವಾಗಿದೆ. ಅದರಲ್ಲಿ ಮುಸ್ಲಿಮರೇ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ್ದಾರೆ. ಲಿಂಗಾಯತರಲ್ಲಿ ವೀರಶೈವ ಪ್ರತ್ಯೇಕವಾಗಿಲ್ಲದೆ ಹೋಗಿದ್ದರೆ ಅವರೇ ಜಾತಿ ಗಣತಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಇರುತ್ತಿದ್ದರು. ಲಿಂಗಾಯತರು 66 ಲಕ್ಷ ಇದ್ದು, ವೀರಶೈವ 10 ಲಕ್ಷ ಇದ್ದಾರೆ. ಎರಡನ್ನು ಸೇರಿಸಿದ್ದರೆ 76 ಲಕ್ಷ ಜನಸಂಖ್ಯೆ ಆಗ್ತಾ ಇದ್ದರು. ಮುಸ್ಲಿಮರು ಸದ್ಯಕ್ಕೆ 75 ಲಕ್ಷ ಮಂದಿ ಇದ್ದಾರೆ.







