Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

---Advertisement---

ಬೆಂಗಳೂರು; ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ.

ಇನ್ನು ಇಂದು ಬೆಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ, ವಿಜಯನಗರ ಭಾಗದಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾತ್ರಿ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಈ ಮಳೆಯ ಸಂದರ್ಭದಲ್ಲಿ ವಾಹನ ಸವಾರರು, ನಡೆದುಕೊಂಡು ಬರುವ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾಕಂದ್ರೆ ಬಿಸಿಲಿನ ಬೇಗೆ ಮರ ಗಿಡಗಳೆಲ್ಲ ಒಣಗಿ ನಿಂತಿರುತ್ತವೆ. ಇದ್ದಕ್ಕಿದ್ದ ಹಾಗೆ ಮಳೆ ಬಂದ ಕಾರಣ, ಮರದ ಕೆಳಗೆ ಹೋಗಿ ನಿಲ್ಲಬೇಡಿ. ಮರದ ಕೊಂಬೆಗಳು ಬೀಳುವ ಸಾಧ್ಯತೆ ಇರುತ್ತದೆ.

ಇನ್ನು ಇದೇ ರೀತಿ ರಾಜ್ಯಾದ್ಯಂತ ಮೂರು ದಿನ ಅಂದ್ರೆ ಏಪ್ರಿಲ್ 17ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಗಾಳಿಯ ವೇಗವೂ ಗಂಟೆಗೆ 30-40 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment