ಚಳ್ಳಕೆರೆ : ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನಾಪತ್ತೆ…!

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 24 :
ಈಜಲು ಹೋಗಿದ್ದ ಬಾಲಕ ಬಾವಿಯಲ್ಲಿ ಬಿದ್ದು ನಾಪತ್ತೆಯಾಗಿದ್ದು, ಅಗ್ನಿಶಾಮಕ ದಳದ ವತಿಯಿಂದ ಬಾಲಕಿನಿಗಾಗಿ ಬಾವಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ತಿಪ್ಪೇಸ್ವಾಮಿ ಎನ್ನುವವರ ಪುತ್ರ ಸೂರ್ಯ ಪ್ರಕಾಶ (16)ವರ್ಷ ಚಳ್ಳಕೆರೆ ನಗರದ ಮಾಕಂಸ್ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದು ಬೇಸಿಗೆ ರಜೆ ಇದ್ದ ಕಾರಣ ನೆರ್ಲಗುಂಟೆ ಗ್ರಾಮದ ಕೆರೆ ಹಿಂಭಾಗದಲ್ಲಿರುವ ಬಾವಿಯಲ್ಲಿ ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ಬಾವಿಯಲ್ಲಿ ಬಿದ್ದು ನಾಪತ್ತೆಯಾಗಿದ್ದಾನೆ. ಬಾಲಕನಿಗಾಗಿ ಅಗ್ನಿಶಾಮಕ ದಳದ ವತಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *