Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಶುಕ್ರವಾರ NCB ಕಚೇರಿಗೆ ತೆರಳುತ್ತಿದ್ದ ಆರ್ಯನ್ ಖಾನ್ ಗೆ ಇದೀಗ ಬಿಗ್ ರಿಲೀಫ್..!

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ಬಾದ್ ಷಾ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಒಂದಷ್ಟು ದಿನ ಜೈಲುವಾಸ ಅನುಭವಿಸಿದ್ದು ಗೊತ್ತೆ ಇದೆ. ಆ ಬಳಿಕ ಜಾಮೀನಿನ ಮೇಲೆ ಹೊರಗು ಬಂದಿದ್ದಾರೆ. ಆದ್ರೆ ಇದೀಗ ಕೋರ್ಟ್ ಮತ್ತಷ್ಟು ರಿಲೀಫ್ ಕೊಟ್ಟಿದೆ.

ಆರ್ಯನ್ ಖಾನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ವಿಧಿಸಿದಾಗ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಗೆ ಬಂದು ಸಹಿ ಹಾಕಿ ಹೋಗಬೇಕು ಎಂಬ ಷರತ್ತು ವಿಧಿಸಿತ್ತು. ಅದರಂತೆ 6 ವಾರಗಳು ತಪ್ಪದೆ ಆರ್ಯನ್ ಖಾನ್ ಎನ್ ಸಿಬಿ ಕಚೇರಿಗೆ ಹೋಗಿ ಬಂದಿದ್ದರು.

ಈ ಸಂಬಂಧ ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಮನವಿಯೊಂದನ್ನ ಮಾಡಿದ್ದರು. ಎನ್ ಸಿ ಬಿ ಕಚೇರಿಗೆ ಹೋಗುವ ವಿಚಾರವಾಗಿ ರಿಯಾಯಿತಿ ನೀಡಬೇಕೆಂದು. ಅದರಂತೆ ವಿಚಾರಣೆ ವೇಳೆ ಆರ್ಯನ್ ಖಾನ್ ಪರ ವಕೀಲರು ಆ ಬಗ್ಗೆ ನ್ಯಾಯಾಧೀಶರಿಗೆ ತಿಳಿಸಿದ್ದರು. ಆರ್ಯನ್ ಖಾನ್ ಕರೆದಾಗೆಲ್ಲಾ ವಿಚಾರಣೆಗೆ ಬರ್ತಾರೆ. ಅವರು ಎನ್ ಸಿ ಬಿ ಕಚೇರಿಗೆ ಬರುವಾಗ ಸಾಕಷ್ಟು ಭದ್ರತೆ ಬೇಕಾಗಿದೆ. ಅವರ ಕೇಸ್ ದೆಹಲಿಯಲ್ಲಿ ನಡೆಯುತ್ತಿದೆ. ಅಲ್ಲಿಗೆ ಹಾಜರಾಗಿ ಅಂದರೂ ಆಗ್ತಾರೆ. ಆದ್ರೆ ಈ ಪ್ರತಿ ಶುಕ್ರವಾರ ಎನ್ ಸಿ ಬಿ ಕಚೇರಿಗೆ ಬರುವ ಬಗ್ಗೆ ಸ್ವಲ್ಪ ರಿಯಾಯಿತಿ ನೀಡಿ ಎಂದು ಕೇಳಿದ್ದರು.

ಅವರ ಮನವಿ ಪುರಸ್ಕರಿಸಿರುವ ಬಾಂಬೆ ಹೈಕೋರ್ಟ್ ಪ್ರತಿ ಶುಕ್ರವಾರ್ ಹಾಜರಾತಿಗೆ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎನ್ಡಬ್ಲ್ಯೂ ಸಾಂಬ್ರೆ ಈ ರಿಯಾಯಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!