Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ 25 ವರ್ಷದ ಯುವತಿ ಸಾವು..!

Facebook
Twitter
Telegram
WhatsApp

ಬೆಂಗಳೂರು: ಈ ಪ್ರೀತಿ ಅನ್ನೋ ಹುಚ್ಚಾಟ ಕೆಲವೊಮ್ಮೆ ಪ್ರಾಣವನ್ನೇ ತೆಗೆದು ಬಿಡುತ್ತೆ. ಅಂಥದ್ದೇ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹಾಗಂತ ಆ ಹುಡುಗಿ ಪ್ರೀತಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಹುಡುಗನ ಹುಚ್ಚಾಟಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರೋದು.

25 ವರ್ಷದ ಸಾಕ್ಷಿ ಎಂಬ ಯುವತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರಯಣ್ ಎಂಬಾತನ ಹುಚ್ಚಾಟಕ್ಕೆ ಒಂದು ಹುಡುಗಿಯ ಪ್ರಾಣವೇ ಹೋಗಿದೆ.

ಅರುಣ್ ಎಂಬಾತ ಸಾಕ್ಷಿಯನ್ನ ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಮದುವೆ ಮಾಡಿಕೋ ಅಂತ ಹೆದರಿಸುತ್ತಿದ್ದನಂತೆ. ಸ್ನೇಹಿತ ಗೋಪಾಲ್ ಎಂಬಾತನ ಜೊತೆ ಸೇರಿ, ಹುಡುಗಿಯ ಮಾವನಿಗೆ ಪೊಲೀಸರ ಹೆಸರಲ್ಲಿ ಕರೆಯನ್ನು ಮಾಡಿದ್ದರಂತೆ. ಅರುಣ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ನಿಮ್ಮ ಹುಡುಗಿ ಮದುವೆಯಾಗಲಿಲ್ಲವೆಂದರೆ ಸಾಯೋದಾಗಿ ಹೇಳುತ್ತಿದ್ದಾನೆ. ಹೀಗಾಗಿ ಬಸವೇಶ್ವರ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿದ್ದನಂತೆ.

ಈ ವಿಷಯ ತಿಳಿದ ಯುವತಿ ಭಯಗೊಂಡಿದ್ದಾಳೆ. ಇದರಿಂದಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿಯ ಪೋಷಕರು ಹೇಳಿದ್ದಾರೆ. ಸದ್ಯ ಗೋಪಾಲ್ ಹಾಗೂ ಅರುಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!