Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ಫಲಿತಾಂಶ ; ಬಾಲಕಿಯರೇ ಮೇಲುಗೈ

---Advertisement---

2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಹೊರ ಬಿದ್ದಿದೆ. ಮಾಮೂಲಿಯಂತೆ ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಗಂಡು ಮಕ್ಕಳು 58.07% ತೆಗೆದುಕೊಂಡಿದ್ದರೆ ಹೆಣ್ಣು ಮಕ್ಕಳು 74.00% ತೆಗೆದುಕೊಂಡಿದ್ದಾರೆ. ಒಟ್ಟು ಶೇಕಡ 66.14% ರಷ್ಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

ಈ ಬಾರಿ 7 ಲಕ್ಷದ 90 ಸಾವಿರದ 890 ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆದಿದ್ದಾರೆ. ಅದರಲ್ಲಿ 5 ಲಕ್ಷದ 23 ಸಾವಿರದ 075 ಮಕ್ಕಳು ಈ ಬಾರಿ ಪರೀಕ್ಷೆಯನ್ನ ಪಾಸ್ ಮಾಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಬರೋಬ್ಬರಿ 22 ಮಕ್ಕಳು 625ಕ್ಕೆ 625 ಅಂಕಗಳನ್ನು ತೆಗೆದು ಉತ್ತೀರ್ಣರಾಗಿದ್ದಾರೆ.

ಸುಮಾರು 75 ಸಾವಿರಕ್ಕೂ ಹೆಚ್ಚಿನ ಮೌಲ್ಯ ಮಾಪಕರು 6 ವಿಷಯಗಳಿಗೆ ಸೇರಿದ 60ಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಾಡಿದ್ದಾರೆ. ಪರೀಕ್ಷೆ ಫಲಿತಾಂಶ ಕಂಡ ಪೋಷಕರು ಹಾಗೂ ಮಕ್ಕಳು ಫುಲ್ ಖುಷಿಯಾಗಿದ್ದಾರೆ.

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮೊದಲ ಸ್ಥಾನದಲ್ಲಿದ್ರೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಉಳಿದಂತೆ ಉಡುಪಿ ಸೆಕೆಂಡ್, ಉತ್ತರನ ಕನ್ನಡ ಮೂರನೇ ಸ್ಥಾನ, ಶಿವಮೊಗ್ಗ ನಾಲ್ಕು, ಕೊಡಗು ಐದು, ಹಾಸನ ಆರು, ಶಿರಸಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಮಂಡ್ಯ, ಹಾವೇರಿ, ಕೋಲಾರ, ಮೈಸೂರು, ಬಾಗಲಕೋಟೆ, ಗದಗ, ಧಾರವಾಡ, ವಿಜಯನಗರ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ 23ನೇ ಸ್ಥಾನ, ರಾಮನಗರ, ಬೆಳಗಾವಿ, ಚಿಕ್ಕೋಡಿ, ಚಾಮರಾಜನಗರ, ಮಧುಗಿರಿ, ಬಳ್ಳಾರಿ, ಕೊಪ್ಪಳ, ಬೀದರ್, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆ 35 ಸ್ಥಾನದಲ್ಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment