Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಆಕಾಶವಾಣಿ ಕೇಂದ್ರಕ್ಕೆ 34ರ ಹರೆಯ : ನಾಳೆ ಸಚಿವ, ಸಂಸದ ಭೇಟಿ, ಶುಭ ಹಾರೈಕೆ

---Advertisement---

ಚಿತ್ರದುರ್ಗ. ಮೇ.02: 1991 ಮೇ 3 ರಂದು ಆರಂಭವಾದ ಚಿತ್ರದುರ್ಗ ಆಕಾಶವಾಣಿ ಕೇಂದ್ರ ಶನಿವಾರ 34 ವರ್ಷ ಪೂರೈಸಿ 35ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಕೆಳಗೋಟೆಯ ಆಕಾಶವಾಣಿ ಕೇಂದ್ರಕ್ಕೆ ಶನಿವಾರ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಲೋಕಸಭಾ ಸದಸ್ಯ ಗೋವಿಂದ ಎಮ್. ಕಾರಜೋಳ ಭೇಟಿ ನೀಡಿ ಶುಭ ಹಾರೈಸಲಿದ್ದಾರೆ.

ಸರ್ವೇ ಜನಃ ಸುಖಿನೋ ಭವಂತು, ಎಂಬ ಧ್ಯೇಯ ಮಂತ್ರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಚಿತ್ರದುರ್ಗ ಆಕಾಶವಾಣಿ ಕೇಂದ್ರ ತನ್ನದೇ ಆದ ಅಪಾರ ಶೋತೃ ಬಳಗ ಹೊಂದಿದೆ.  34 ವರ್ಷದಿಂದ ಮಾಹಿತಿ, ಶಿಕ್ಷಣ, ಮನರಂಜನೆಯ ಪ್ರಸಾರ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಸದ್ಯ ನೆಟ್‌ವರ್ಕ್ ಲೈವ್‌ ಸ್ಟ್ರೀಮ್, ನ್ಯೂಸ್ ಆನ್ ಏರ್ ಆಪ್ ಹಾಗೂ ಡಿಟಿಹೆಚ್ ಸೇವೆಗಳ ಮೂಲಕ ವಿಶ್ವವ್ಯಾಪಿ ಜಾಲವನ್ನು ವಿಸ್ತರಿಸಿಕೊಂಡಿದೆ.

 

ಶನಿವಾರ ಮುಂಜಾನೆ 8:30 ರಿಂದ ಸಂಜೆ 7:30 ವರೆಗೆ ಚಿತ್ರದುರ್ಗ ಆಕಾಶವಾಣಿ ವಿಶೇಷ ಕಾರ್ಯಕ್ರಮಗಳು ಬಿತ್ತರವಾಗಲಿವೆ. ಮುಂಜಾನೆ 8:30 ರಿಂದ 9 ಗಂಟೆಯವರೆಗೆ ಚಿತ್ರನಟಿ ಅದಿತಿ ಪ್ರಭುದೇವ ಅವರೊಂದಿಗೆ ನೇರ ಸಂದರ್ಶನ, 9 ರಿಂದ 10 ಗಂಟೆಯವರೆಗೆ ಕೇಳುಗರೊಂದಿಗೆ ನೇರ ಫೊನ್ ಇನ್ ಕಾರ್ಯಕ್ರಮ, 10 ರಿಂದ 11 ಗಂಟೆಯವರೆಗೆ ಸಾಧಕರ ಪರಿಚಯಾತ್ಮಕ ಸರಣಿ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಲ್ ಅವರ ಶಿಷ್ಯ ಪಿ.ಹೆಚ್.ವಿಶ್ವನಾಥ್ ಭಾಗವಹಿಸುವರು. 11 ರಿಂದ 12 ಗಂಟೆಯ ವರೆಗೆ ಹೆಸರಾಂತ ಹಾಡುಗಾರ ತೋಟಪ್ಪ ಉತ್ತಂಗಿ ಅವರಿಂದ ಗಾನಸುಧೆ ಕಾರ್ಯಕ್ರಮ, ನಂತರ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಆಕಾಶವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ತಮ್ಮ ಸವಿ ನೆನಪು ಹಂಚಿಕೊಳ್ಳಲಿದ್ದಾರೆ.

ಮಧ್ಯಾಹ್ನ 2:40 ರಿಂದ 3:40 ವರೆಗೆ ಕಾದಂಬರಿಕಾರ ಹಾಗೂ ಚಲಚಿತ್ರ ಸಾಹಿತಿ ಡಾ.ಬಿ.ಎಲ್.ವೇಣು ನೇರ ಮಾತು ಕತೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ರಿಂದ 5:30 ವರೆಗೆ ಕವಿ ಹಾಗೂ ಸಾಹಿತಿಗಳ ಶುಭನುಡಿ ಕಾರ್ಯಕ್ರಮ ಪ್ರಸಾರವಾಗಲಿದೆ. ಸಂಜೆ 5:30 ಕ್ಕೆ ಚಿತ್ರದುರ್ಗ ಆಕಾಶವಾಣಿ ಕುರಿತು ಉದಯೋನ್ಮುಖ ಕವಿಗಳು ಬರೆದ ಕಾವ್ಯಗಳ ಪ್ರಸ್ತುತಿ ಪ್ರಸಾರವಾಗಲಿದೆ. ಸಂಜೆ 6:50ಕ್ಕೆ ಕೃಷಿ, ತೋಟಗಾರಿಕೆ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಅಭಿಪ್ರಾಯಗಳನ್ನಾಧರಿಸಿದ ಕಾರ್ಯಕ್ರಮ ಹಾಗೂ ಸಂಜೆ 7:30ಕ್ಕೆ ರೈತ ಕೇಳುಗರ ಅಭಿಪ್ರಾಯ ಆಧರಿಸಿದ ಕಾರ್ಯಕ್ರಮ ಬಿತ್ತರವಾಗುವುದು.
ಕೇಳುಗರು ಸದಾ ಕಾಲ ಚಿತ್ರದುರ್ಗ ಆಕಾಶವಾಣಿ ಕೇಂದ್ರಕ್ಕೆ ತಮ್ಮ ಪ್ರೋತ್ಸಾಹ ನೀಡುವಂತೆ ನಿಲಯದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್, ನಿಲಯದ ತಾಂತ್ರಿಕ ಮುಖ್ಯಸ್ಥಾ ಕೆ.ಕೆ. ಮಣಿ ಹಾಗೂ ಪ್ರಸಾರ ಕಾರ್ಯ ಮುಖ್ಯಸ್ಥ ಶಿವಪ್ರಕಾಶ ಡಿ.ಆರ್. ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment