Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿಯನ್ನ ಸಿಎಂ ಮಾಡಿಯೇ ಮಾಡ್ತೀವಿ ; ನೊಣವಿನಕೆರೆ ಸ್ವಾಮೀಜಿಯಿಂದ ಮತ್ತೆ ಭವಿಷ್ಯ..!

ಡಿಕೆ ಶಿವಕುಮಾರ್
---Advertisement---

 

ಗದಗ; ಸದ್ಯ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗಬೇಕು ಎಂಬುದೇ ಇರುವ ಆಕಾಂಕ್ಷೆ. ಅದಕ್ಕಾಗಿ ತಾಳ್ಮೆಯಿಂದ ಕಾಯುತ್ತಾ ಇದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ತಾಳ್ಮೆಯಿಂದ ಕಾಯ್ತಾ ಇದಾರೆ. ಇದರ ನಡುವೆ ಕಳೆದ ವರ್ಷ ಅಕ್ಟೊಬರ್ ತಿಂಗಳಲ್ಲಿ ನುಡಿದಿದ್ದ ಭವಿಷ್ಯವನ್ನು ನೊಣವಿನಕೆರೆ ಸ್ವಾಮೀಜಿಯವರು ಮತ್ತೆ ಪುನರ್ ಉಚ್ಛರಿಸಿದ್ದಾರೆ.

ನೊಣವಿನಕೆರೆ ಸ್ವಾಮಿಗಳು ಎಂದರೆ ಡಿಕೆ ಶಿವಕುಮಾರ್ ಅವರಿಗೆ ನಂಬಿಕೆ ಜಾಸ್ತಿ. ಏನೇ ಒಂದು ಕೆಲಸಕ್ಕೆ ಕೈ ಹಾಕುವಾಗಲೂ ನೊಣವಿನಕೆರೆ ಸ್ವಾಮಿಗಳ ದರ್ಶನ ಮಾಡಿ, ಅಲ್ಲಿನ ಸ್ವಾಮೀಜಿಯ ಆಶೀರ್ವಾದ ಪಡೆಯುವುದನ್ನು ಮಾತ್ರ ಮಿಸ್ ಮಾಡ್ತಾ ಇರಲಿಲ್ಲ. ಇದೀಗ ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಕರಿವೃಷಭ ದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಈ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ಕೂಡ ಹೇಳಿದ್ದೆ ಅವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿಸುತ್ತೇನೆ. ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಮ್ಮ ಮಠದ ಭಕ್ತರು. ಅವರನ್ನು ಮುಖ್ಯಮಂತ್ರಿಯಾಗಿಸುತ್ತೇವೆ.

ಅವರು ಮುಖ್ಯಮಂತ್ರಿಯಾದ ಮೇಲೆ ಮುಕ್ತಿಮಂದಿರ, ತ್ರಿಕೋಟಿ ಶಿವಲಿಂಗವನ್ನು ಪುನರ್ ಸ್ಥಾಪನೆ ಮಾಡಿಸುತ್ತೇವೆ ಎಂದಿದ್ದಾರೆ. ಕಳೆದ ಬಾರಿಯೂ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ವಿಚಾರದ ಬಗ್ಗೆ ಹೇಳಿದ್ದರು. ಆದರೆ ಯಾವಾಗ ಮಾಡಬಹುದು ಎಂಬುದನ್ನು ಹೇಳಿರಲಿಲ್ಲ. ಇದೀಗ ಮತ್ತೆ ಮುಖ್ಯಮಂತ್ರಿ ಮಾಡುವ ಬಗ್ಗೆ ಉಚ್ಛಾರಣೆ ಮಾಡಿದ್ದಾರೆ. ಮುಂದೊಂದು ದಿನ ಅವರು ಮುಖ್ಯಮಂತ್ರಿ ಆಗಿಯೇ ಆಗ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅಪಾರವಾಗಿ ನಂಬುವ ಮಠಾಧೀಶರೆ ಈ ಮಾತನ್ನು ಹೇಳಿದಾಗ ಅವರ ಬೆಂಬಲಿಗರಲ್ಲಿ ಅತೀವ ಸಂತಸ ತಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...