ಈ ಬಾರಿಯ ಐಪಿಎಲ್ ಮ್ಯಾಚ್ ಸಂಪೂರ್ಣವಾಗಿ ಮುಂದೂಡಿಕೆಯಾಗಿದೆ. ಪಾಕ್ ಮೇಲೆ ಭಾರತ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ರೀತಿಯ ನಿರ್ಧಾರವನ್ನ ತೆಗೆದುಕೊಂಡಿದೆ. ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಮೇಲೆ ದಾಳಿ ನಡೆಯುತ್ತಿದೆ. ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಈ ದಾಳಿ ನಡೆಯುತ್ತಿದೆ. ಈಗಾಗಲೇ ಉಗ್ರರ ಸಾಕಷ್ಟು ಅಡಗುತಾಣಗಳನ್ನು ಉಡೀಸ್ ಮಾಡಲಾಗಿದೆ. ಈಗ ಎಲ್ಲರೂ ಎಚ್ಚರಿಕೆಯಿಂದ ಇರಬೇಕಾಗಿರುತ್ತದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ರೆಡಿ ಇಲ್ಲ ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ 25ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿದೇಶಿ ಆಟಗಾರರ ಭದ್ರತೆಯ ದೃಷ್ಟಿಯಿಂದ ಬಿಸಿಸಿಐ ಯಾವುದೇ ಸವಾಲುಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ದೇಶದಲ್ಲಿ ನಡೆಯಬೇಕಿದ್ದ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡಿಕೆ ಮಾಡಲಾಗಿದೆ.
ಹೀಗೆ ಪಂದ್ಯಗಳು ರದ್ದಾದ ಕಾರಣ ಆರ್ಸಿಬಿ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಸಲ ಕಪ್ ನಮ್ದೆ ಕಪ್ ನಮ್ಮದೆ ಅನ್ನೋ ಆಸೆಯಲ್ಲಿದ್ದರು. ಆದರೆ ಈಗ ನೋಡಿದ್ರೆ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಸತತ 17 ಸೀಸನ್ ಗಳಿಂದ ಕಾಯುತ್ತಿದ್ದ ಆರ್ಸಿಬಿ ಅಭಿಮಾನಿಗಳಿಗೆ ಈ ಸೀಸನ್ ಭರವಸೆಯನ್ನ ನೀಡಿತ್ತು. ಪಾಯಿಂಟ್ಸ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದ್ದು, ಫ್ಲೇ ಆಫ್ ಹಂತಕ್ಕೆ ತಲುಪಿತ್ತು. ಆದರೆ ಈಗ ಐಪಿಎಲ್ ಟೂರ್ನಿಯನ್ನೇ ರದ್ದುಗೊಳಿಸಿರುವುದು ಆಘಾತಕ್ಕೆ ಕಾರಣವಾಗಿದೆ. ದೇಶ ಮೊದಲು ಕ್ರಿಕೆಟ್ ಆಮೇಲೆ ಎಂಬ ನಿಲುವಿನ ಹಿನ್ನೆಲೆ ಐಪಿಎಲ್ ಟೂರ್ನಿಮೆಂಟ್ ಅನ್ನು ರದ್ದು ಮಾಡಲಾಗಿದೆ.






