ಸುದ್ದಿಒನ್, ಹಿರಿಯೂರು, ಮೇ. 09 : ನಗರದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಇಲಾಖೆ ನಿಯಮಗಳನ್ನು ಪಾಲನೆ ಮಾಡಿಕೊಂಡು ಮಾರ್ಗಸೂಚಿಯಂತೆ ಮಕ್ಕಳ ದಾಖಲಾತಿ ಮಾಡಿಕೊಳ್ಳಬೇಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಖಾಸಗಿ ಶಾಲೆಯ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಈಗಾಗಲೇ ದಾಖಲಾತಿ ಪ್ರಕ್ರಿಯೆಗೆ ಮೊದಲೇ ಒಂದು ಸಭೆಯನ್ನು ನಡೆಸಿದ್ದು, ಎಲ್ಲ ಶಾಲೆಗಳಿಗೂ ಇಲಾಖಾ ನಿಯಮಗಳ ಬಗ್ಗೆ ಸೂಕ್ತ ತಿಳುವಳಿಕೆ ನೀಡಲಾಗಿದೆ. ಶಾಲೆಯಲ್ಲಿ ಸಂಗ್ರಹಿಸುವ ಶುಲ್ಕದ ವಿವರವನ್ನು ಪ್ರಧಾನವಾಗಿ ಕಾಣುವಂತೆ ಫ್ಲೆಕ್ಸ್ ನಲ್ಲಿ ಅಳವಡಿಿರುವುದು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ವಹಿಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇರುದ್ರಪ್ಪ, ಶಿಕ್ಷಣ ಸಂಯೋಜಕರಾದ ಪುಟ್ಟಸ್ವಾಮಿ, ಸೈಯದ್ ಜಾಫರ್, ನಾಗರಾಜ್, ಶಿವಾನಂದ್, ರಂಗಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ನಿಜಗುಣಮೂರ್ತಿ, ಚಿದಾನಂದ್, ನಾಗರಾಜ್, ಪ್ರಸನ್ನ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











