Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕದನ ವಿರಾಮ ಒಪ್ಪಿಕೊಂಡ ಪಾಕ್ ಉಲ್ಲಂಘನೆ ಮಾಡಿದ್ದೇಕೆ..?

---Advertisement---

ನೆಮ್ಮದಿಯಿಂದ ಕಾಶ್ಮೀರದ ಸೌಂದರ್ಯ ಸವಿಯುತ್ತಿದ್ದ ಹಿಂದೂಗಳ ಮೇಲೆ ಪಾಕಿಸ್ತಾನ್ ಉಗ್ರರು ಬಿಟ್ಟ ಗುಂಡಿನ ದಾಳಿಗೆ ಭಾರತ ತಡಕಿ ನೋಡಿಕೊಳ್ಳುವಂತ ಉತ್ತರ ನೀಡಿದೆ. ತಿನ್ನೋಕು ಗತಿ ಇಲ್ಲದ ಪಾಕಿಸ್ತಾನ ಭಾರತದ ಮುಂದೆ ತಲೆ ಬಾಗಿತ್ತು. ಇದನ್ನ ಇಲ್ಲಿಗೆ ನಿಲ್ಲಿಸುವಂತ ಅಮೆರಿಕಾದ ಬಳಿ ಮನವಿ ಮಾಡಿತ್ತು. ಹೋಗ್ಲಿ ಪಾಪ ಅಂತ ಕದನ ವಿರಾಮ ಘೋಷಿಸಿದ್ರೆ ಹಿಂದೆನೇ ದಾಳಿ ಮಾಡಿ ಮತ್ತೆ ಭಾರತದ ಕೆಂಗಣ್ಣಿಗೆ ಗುರಿಯಾಗಿತ್ತು. ಅಷ್ಟಕ್ಕೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದಾದರೂ ಯಾಕೆ ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ.

ಕದನ ವಿರಾಮ ಉಲ್ಲಂಘನೆ ಮಾಡುವುದಕ್ಕೆ ಪ್ರಮುಖ ಕಾರಣ ಅಂತರಾಷ್ಟ್ರೀಯ ಹಣಕಾಸು ನಿಧಿ. ಪಾಕಿಸ್ತಾನಕ್ಕೆ ನೀಡುವ 1.2 ಬಿಲಿಯನ್ ಡಾಲರ್ ಸಾಲ. ಪಾಕಿಸ್ತಾನಕ್ಕೆ IMF 19 ಕೋಟಿ ರೂಪಾಯಿ ಸಾಲವನ್ನ ನೀಡಿದೆ. ಈ ಸಾಲ ಬಿಡುಗಡೆಗೆ ಅಮೆರಿಕಾ ಷರತ್ತೊಂದನ್ನ ವಿಧಿಸಿತ್ತು. ಅಂದ್ರೆ ಕದನ ವಿರಾಮ ಘೋಷಣೆ ಮಾಡಿದ್ರೆ ಸಾಲ ನೀಡುವುದಾಗಿ ಅಮೆರಿಕಾ ಹೇಳಿದ್ದ ಬಳಿಕ ಪಾಕಿಸ್ತಾನ ಕದನ ವಿರಾಮ ಘೋಷಣೆ ಮಾಡಿತ್ತು.

ಆದರೆ ಪಾಕಿಸ್ತಾನದ ನಿರ್ಧಾರದ ವಿರುದ್ಧ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ತಿರುಗಿ ಬಿದ್ದಿದ್ದಾರೆ. ಪಾಕಿಸ್ತಾನ ಸರ್ಕಾರ ಕದನ ವಿರಾಮ ಮಾಡಿದ್ರು ಅಸೀಮ್ ಸೂಚನೆಯ ಮೇರೆಗೆ ಪಾಕಿಸ್ತಾನ ಸೇನೆ ದಾಳಿ ಮಾಡಿದೆ. ಡ್ರೋನ್ ದಾಳಿ ನಡೆದಿದೆ. ಹೀಗಾಗಿ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನದ ಮೇಲೆ ಮರು ದಾಳಿಗೆ ವಿದೇಶಾಂಗ ಸಚಿವರು ಕೂಡ ಸೂಚನೆ ನೀಡಿದ್ದಾರೆ. ಪಾಕಿಸ್ತಾನ ಆರ್ಥಿಕ ನಷ್ಟದಲ್ಲಿರುವ ವಿಚಾರ ಎಲ್ಲರಿಗೂ ಗೊತ್ತಿರುವುದೇ. ಆದರೆ ಅಲ್ಲಿನ ಸೇನೆಯೇ ದಾಳಿಗೆ ಮುಂದಾಗಿದ್ದು, ವಿಪರ್ಯಾಸ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment