ಸುದ್ದಿಒನ್, ಹಿರಿಯೂರು, ಮೇ. 11 : ಯುದ್ಧ ಯಾವುದಕ್ಕೂ ಪರಿಹಾರವಲ್ಲ. ಆದರೆ ನಿರಂತರವಾಗಿ ಭಯೋತ್ಪಾದಕ ದಾಳಿಗಳಿಗೆ ಒಳಗಾಗಿ ಸಾವು ನೋವುಗಳನ್ನು ಕಂಡ ದೇಶ ನಮ್ಮದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಬೇಸರ ವ್ಯಕ್ತಪಡಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಹಲ್ಗಾಮ್ ದಾಳಿ ಮಾಡುವ ಮೂಲಕ ಪಾಕಿಸ್ತಾನ ಭಾರತವನ್ನು ಯುದ್ಧಕ್ಕೆ ಆಹ್ವಾನಿಸಿದಂತಾಗಿದೆ. ಭಯೋತ್ಪಾದಕತೆಯನ್ನು ಬೆಂಬಲಿಸುವ ಪಾಪಿ ಪಾಕಿಸ್ತಾಕ್ಕೆ ಬುದ್ದಿ ಕಲಿಸಲು ಸುಸಮಯವಾಗಿತ್ತು. ಆತುರದ ಕದನ ವಿರಾಮ ನಿರ್ಧಾರ ದೇಶದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಅಷ್ಟಕ್ಕೂ ಕದನ ವಿರಾಮಕ್ಕೆ ಅರ್ಹ ದೇಶವೇ ಅಲ್ಲ ಅದು. ಪಾಕಿಸ್ತಾನದ ಮೇಲೆ ಮತ್ತೊಷ್ಟು ಹೊಡೆತ ಕೊಟ್ಟು, ಭಾರತದ ತಂಟೆಗೆ ಬರದಂತೆ ಎಚ್ಚರಿಕೆ ಕೊಟ್ಟು ಆನಂತರ ಕದನ ವಿರಾಮ ಘೋಷಣೆ ಮಾಡಬಹುದಿತ್ತು ಎಂದು ಅವರು ಹೇಳಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















