ನಾನು ಮತ್ತೆ ಬಿಜೆಪಿಗೆ ಬರ್ತೇನೆ ; ಬಸನಗೌಡ ಪಾಟೀಲ್ ಯತ್ನಾಳ್

suddionenews
1 Min Read

 

ವಿಜಯಪುರ; ಶಾಸಕ ಬಸನಗೌಡ ಪಾಟೀಲ್ ಅವರನ್ನ ಈಗಾಗಲೇ ಬಿಜೆಪಿ ಪಕ್ಷ ಉಚ್ಛಾಟನೆ ಮಾಡಿದೆ. ಅದು ಆರು ವರ್ಷಗಳ ಕಾಲ. ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುತ್ತಾರಾ ಇಲ್ವಾ ಅನ್ನೋದು ಗೊತ್ತಿಲ್ಲದ ಮಾಹಿತಿ. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆ ಬಗ್ಗೆ ಮಾತನಾಡಿದ್ದಾರೆ. ನಾನು ಮತ್ತೆ ಬಿಜೆಪಿಗೆ ಬರ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಪಕ್ಷದಿಂದ ಶಾಶ್ವತವಾಗಿ ಹೊರಹಾಕಲಾಗಿದೆ ಎಂದು ಹಲವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವರಿಗೆ ಹುಚ್ಚು ಹಿಡಿದಿದ್ದು, ಎಲ್ಲರೂ ನನ್ನನ್ನು ಬಿಜೆಪಿಗೆ ಮತ್ತೆ ಕರೆಸಿಕೊಳ್ಳುವುದಿಲ್ಲ ಎಂದು ಭಾವಿಸಿದ್ದಾರೆ ಎಂದಿದ್ದಾರೆ.

ಆದರೆ ಮೇಲಿನವರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ನಾನು ರಾಜ್ಯದ ಯಾವ ನಾಯಕರ ಮನೆಗೂ ಹೋಗಲ್ಲ. ಹೋಗೋದು ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದ ನಂತರವೇ ನನ್ನ ಪಕ್ಷಕ್ಕೆ ವಾಪಸ್ ಕರೆಸಿಕೊಳ್ಳುವುದಾಗಿ ಪಕ್ಷದ ವರಿಷ್ಠರು ಹೇಳಿದ್ದಾರೆ ಎಂದಿದ್ದಾರೆ. ಈ ಮೂಲಕ ಪಕ್ಷಕ್ಕೆ ಮತ್ತೆ ಬರ್ತೇನೆ ಅಂತಾನು ಸುಳಿವು ನೀಡಿದ್ದಾರೆ.

ಈ ಹಿಂದೆ ವಿಜಯೇಂದ್ರ ಅವರ ವಿರುದ್ಧ ತೊಡೆತಟ್ಟಿದ್ದ ಯತ್ನಾಳ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟಿದ್ದರು. ಅಲ್ಲದೇ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವ ಸವಾಲು ಕೂಡ ಹಾಕಿದ್ದರು. ನಾನು ಕೂಡ ಆ ಸ್ಥಾನದ ಆಕಾಂಕ್ಷಿ ಎಂದಿದ್ದ ಯತ್ನಾಳ್ ಅವರನ್ನೇ ಪಕ್ಷ ದಿಢೀರನೇ ಉಚ್ಛಾಟನೆ ಮಾಡಿತ್ತು. ಇದು ಎಲ್ಲರಿಗೂ ಶಾಕಿಂಗ್ ಸುದ್ದಿಯೂ ಆಗಿತ್ತು. ಈಗ ನೋಡಿದ್ರೆ ಮತ್ತೆ ವಿಜಯೇಂದ್ರ ಸ್ಥಾನದ ಬಗ್ಗೆಯೇ ಮಾತನಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks