Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಾಂತರ ನಿಷೇಧ ಕಾಯ್ದೆ ಪ್ರತಿ ಹರಿದು ಹಾಕಿ ವಿರೋಧ ವ್ಯಕ್ತಪಡಿಸಿದ ಡಿಕೆಶಿ..!

Facebook
Twitter
Telegram
WhatsApp

ಬೆಳಗಾವಿ: ವಿರೋಧ ಪಕ್ಷಗಳ ವಿರೋಧದ ನಡುವೆಯೇ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನ ಮಂಡಿಸಿದೆ. ಇದು ವಿರೋಧ ಪಕ್ಷದವರ ಕೋಪಕ್ಕೆ ಮತ್ತಷ್ಟು ಕಾರಣವಾಗಿದೆ. ಇದೀಗ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಂಡಾಮಂಡಲಾರಾಗಿದ್ದಾರೆ.

ಶಾಸಕರಿಗೆ ನೀಡುವ ಪ್ರತಿಯನ್ನ ಹರಿದು ಹಾಕಿ ವಿರೋಧ ವ್ಯಕ್ತಪಡಿಸಿದ್ದು, ನೂತನ ಶಾಸಕರಾದರೆ ಒಪ್ಪಿಕೊಳ್ಳಬಹುದು. ಎಲ್ಲಾ ತಿಳಿದ ನೀವೇ ಈ ರೀತಿ ಮಾಡಿದರೆ ಹೇಗೆ ಎಂದು ಸ್ಪೀಕರ್ ಕಾಗೇರಿಯವರನ್ನ ಪ್ರಶ್ನಿಸಿದ್ದಾರೆ. ಈ ಮಸೂದೆ ಮಂಡಿಸಲು ಇದೇ ಅಧಿವೇಶನದಲ್ಲೇ ಅನುಮತಿ ಪಡೆದುಕೊಂಡಿತ್ತು. ಆದ್ರೆ ಮಂಗಳವಾರವೇ ಮಂಡನೆ ಮಾಡುವ ಬಗ್ಗೆ ವಿರೋಧ ಪಕ್ಷಗಳಿಗೆ ಸುಳಿವೇ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಸೂದೆಯನ್ನು ಮಂಡಿಸಿದ ಮಾತ್ರಕ್ಕೆ ಇದು ಅನುಮೋದನೆಯಾಗಿದೆ ಎಂದು ಅರ್ಥವಲ್ಲ. ಶ್ರೀಕ್ಷೇತ್ರ ಧರ್ಮಸ್ಥಳ ನಮ್ಮ ನಂಬಿಕೆ, ಜೈನ ಧರ್ಮದವರು ದೇವಾಲಯವನ್ನು ಮುನ್ನಡೆಸುತ್ತಿದ್ದಾರೆ. ಅದೇ ಧರ್ಮದವರಾದ ವೀರೇಂದ್ರ ಹೆಗ್ಗಡೆಯವರು ಅಲ್ಲಿನ ಧರ್ಮಾಧಿಕಾರಿಗಳು. ಅವರು ಮಂಜುನಾಥಸ್ವಾಮಿಯ ಧರ್ಮಾಧಿಕಾರಿಗಳು. ಅವರು ಎಂದಾದರೂ ಜೈನ ಧರ್ಮಕ್ಕೆ ಮತಾಂತರಗೊಳ್ಳಿ ಎಂದು ಹೇಳಿದ್ದಾರಾ ಅಥವಾ ಅವರು ಬೇರೆ ಧರ್ಮಕ್ಕೆ ಮತಾಂತರಗೊಂಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!