Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇನ್ನು 4 ದಿನ ಜೋರು ಮಳೆ..!

---Advertisement---

ಬೆಂಗಳೂರು; ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆರಾಯ ಬೆಂಬಿಡದೆ ಸುರಿಯುತ್ತಿದ್ದಾನೆ. ಬೆಳಗ್ಗೆಯೇ ಮಳೆ ಶುರುವಾಗುವ ಕಾರಣ ಕೆಲಸಕ್ಕೆ ಹೋಗುವವರು, ಹೊರಗಡೆ ಹೋಗುವವರ ಪರಿಸ್ಥಿತಿ ಕಷ್ಟಕರವಾಗಿದೆ‌. ಆದರೆ ಇನ್ನು ನಾಲ್ಕು ದಿನ ಇದೇ ರೀತಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದ್ರೆ ಮೇ 24ರವರೆಗೂ ಇದೇ ರೀತಿ ಮಳೆರಾಯ ದರ್ಶನ ಕೊಡಲಿದ್ದಾನೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆ ಬೆಳ್ಳಂಬೆಳಗ್ಗೆಯೇ ಮಳೆಯಿಂದ ಶುಭೋದಯವಾಗಿದೆ.

ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಮುಂದಿನ 4 ದಿನಗಳವರೆಗೂ ಜೋರು ಮಳೆಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದ ವಿವಿಧ ಭಾಗಗಳಲ್ಲಿ ಜೋರಾದ ಮಳೆಯ ದಾಖಲಾಗಿದೆ. ಬೆಂಗಳೂರು ಸೇರಿ ಹಲವಾರು ಪ್ರದೇಶಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕರ್ನಾಟಕ ಕರಾವಳಿ ಬಳಿ ವಾಯುಭಾರ ಕುಸಿತ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಒಳನಾಡು ಪ್ರದೇಶದ ಟ್ರಫ್ ಆಕ್ಟೀವ್ ಆಗಲಿದೆ.

ಬೆಂಗಳೂರಿನಲ್ಲಿ 23ನೇ ತಾರೀಖಿನವರೆಗೂ ಜೋರು ಮಳೆಯಾಗುವ ಎಲ್ಲಾ ಸಾಧ್ಯತೆಯೂ ಇದೆ. ಈಗಾಗಲೇ ಎರಡು ದಿನ ಸುರಿದ ಮಳೆಗೆ ಸಿಲಿಕಾನ್ ಸಿಟಿ ಕೆರೆಯಂತೆ ಆಗಿದೆ. ಹೀಗಾಗಿ ಇಂದು ಕೂಡ ಬೆಂಗಳೂರಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು‌ ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ ಜೋರಾಗಿದೆ. ಈ ಭಾಗದಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಡೆ, ಬೆಳಗಾವಿ, ತುಮಕೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment