Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತ್ತೀಚೆಗೆ ವಿವಾದಕ್ಕೆ ಸಿಲುಕುತ್ತಿರುವ ಕೊಹ್ಲಿಗೆ ಪಾಕ್ ಮಾಜಿ ಕ್ರಿಕೆಟ್ ಆಟಗಾರನ ಸಲಹೆ ಏನು ಗೊತ್ತಾ..?

Facebook
Twitter
Telegram
WhatsApp

ದಕ್ಷಿಣ ಆಫ್ರಿಕಾ ಪ್ತವಾಸಕ್ಕೆ ಹೋಗುವ ಮುನ್ನ ವಿರಾಟ್ ಕೊಹ್ಲಿ ಸುದ್ದಿಗೋಷ್ಟಿ ನಡೆಸಿ ಹೊರ ಹಾಕಿದ ಅಸಮಾಧಾನ ಇನ್ನು ಕೂಡ ತಣ್ಣಗಾಗುತ್ತಿಲ್ಲ. ಒಂದಲ್ಲ ಒಂದು ವಿಚಾರಕ್ಕೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದೀಗ ಆ ವಿಚಾರಗಳನ್ನೆಲ್ಲಾ ಬದಿಗಿಡುವಂತೆ ಪಾಕ್ ಮಾಜಿ ಆಟಗಾರ ಸಲಹೆ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಕೊಹ್ಲಿಗೆ ಸಲಹೆಯೊಂದನ್ನ ಕೊಟ್ಟಿದ್ದಾರೆ. ಎರಡು ವರ್ಷಗಳಿಂದ ಶತಕ ಗಳಿಸಿಲ್ಲ. ಅನಗತ್ಯ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳುವ ಬದಲು ಆಟದ ಕಡೆ ಗಮನ ಕೊಡಿ ಎಂದಿದ್ದಾರೆ.

ಸೌರವ್ ಗಂಗೂಲಿ ಅಥವಾ ಬೇರೆಯವರ ದಂತಕಥೆಗಳ ವಿರುದ್ಧ ಮಾತನಾಡುವುದರಿಂದ ಆಟ ಸುಧಾರಿಸುವುದಿಲ್ಲ. ವಿರಾಟ್ ಕೊಹ್ಲಿ ಅನಿಲ್ ಕುಂಬ್ಳೆ ಜೊತೆಗೂ ಮನಸ್ತಾಪ ಇತ್ತು. ಈಗ ಗಂಗೂಲಿ ಜೊತೆಯಾಗಿದೆ. ಕುಂಬ್ಳೆ ಹಾಗೂ ಗಂಗೂಲಿ‌ ಈಗಾಗಲೇ ಆಟದಲ್ಲಿ ಹೀರೋಗಳು ಎಂದು ಸಾಬೀತುಪಡಿಸಿದ್ದಾರೆ. ಈಗ ಕೊಹ್ಲಿ ಅನಗತ್ಯ ವಿವಾದಕ್ಕೆ ತಲೆಕೆಡಿಸಿಕೊಳ್ಳುವ ಬದಲು ಆಟದಲ್ಲಿ ತೋರಿಸಲಿ ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!