Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಲ್ಪನಿಗೆ ಐಶ್ವರ್ಯ ಬಂದರೆ : ಮಡೆನೂರು ಮನು ವಿರುದ್ಧ ಜಗ್ಗೇಶ್ ಕೆಂಡಾಮಂಡಲ..!

---Advertisement---

ಮಡೆನೂರು ಮನು ಈಗಷ್ಟೇ ಒಂದು ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದೇ ಒಂದು ಸಿನಿಮಾಗೇನೆ ಅಹಂಕಾರದ ಮಾತುಗಳನ್ನ ಆಡುವುದಕ್ಕೆ ಶುರು ಮಾಡಿದ್ದಾರೆ. ಅತ್ಯಾ*ರ ಕೇಸಲ್ಲಿ ಜೈಲು ಸೇರಿರುವ ಮಡೆನೂರು ಮನು, ಆಡಿದ ಒಂದೊಂದು ಆಡಿಯೋಗಳು ಸಹ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದಾವೆ. ಅದರಲ್ಲೂ ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಆಡಿದ ಮಾತುಗಳು ಕನ್ನಡಿಗರನ್ನ ಕೆಂಡಾಮಂಡಲವಾಗಿಸಿದೆ.

ಮಡೆನೂರು ಮನು ಆಡಿದ ಮಾತುಗಳು ಎನ್ನಲಾದ ಶಿವಣ್ಣರ ಸಾವು, ದರ್ಶನ್, ಧ್ರುವ ಸರ್ಜಾ ಮೀರಿಸುವ ಮಾತುಗಳಿಗೆ ಫಿಲ್ಮ್ ಚೇಂಬರ್ ಕೂಡ ವಿರೋಧ ವ್ಯಕ್ತಪಡಿಸಿದೆ. ಎಲ್ಲೆಡೆ ಆತನನ್ನು ಬ್ಯಾನ್ ಮಾಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಇನ್ನ್ಯಾವುದೇ ಶೋನಲ್ಲೂ ಆತ ಕಾಣಿಸಿಕೊಳ್ಳಬಾರದು ಅಂತಾನೇ ಆಗ್ರಹಗಳು ಕೇಳಿ ಬರುತ್ತಿವೆ. ಇದೀಗ ಈ ಸಂಬಂಧ ನವರಸ ನಾಯಕ ಜಗ್ಗೇಶ್ ಅವರು ಕೂಡ ಟ್ವೀಟ್ ಮಾಡಿದ್ದಾರೆ.

ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ, ಗುರು ಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸವೇ ಇಲ್ಲ. ಇಂದು ಇದ್ದದ್ದು ನಾಳೆ ಇರದು. ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕನಸುಗಳೇ. ಆಯುಷ್ಯ ಬರೆಯೋದು ಬ್ರಹ್ಮ, ಚಿಲ್ಲರೆ ಮನುಷ್ಯರಲ್ಲ. ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು. ಶಿವರಾಜ್ಕುಮಾರ್ ಚಿತ್ರರಂಗದ ಕಿರೀಟವಿದ್ದಂತೆ. ಎಲ್ಲರನ್ನು ಪ್ರೀತಿಸುವ ಜೀವ. ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ. ನೀವೂ ಹಿಮಾಲಯ. ನಿಮಗೆ ದೀರ್ಘಾಯುಷ್ಯ ಪ್ರಾಪ್ತಿ. ನಿಮ್ಮನ್ನ ಹೆತ್ತವರು, ಕನ್ನಡಿಗರ ಆಶೀರ್ವಾದವಿದೆ ಎಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment