Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 5 ದಿನಗಳ ಮಳೆ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

---Advertisement---

ಬೆಂಗಳೂರು; ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಶುರುವಾಗಿದೆ. ಬೆಳ್ಳಂ ಬೆಳಗ್ಗೆಯೇ ಮಳೆ ಜಿಟಿಜಿಟಿ ಅಂತ ಎಲ್ಲರ ನಿದ್ದೆಯನ್ನು ಕೆಡಿಸುತ್ತಿದೆ. ಎತ್ತು ಹೊಡ್ಕೊಂಡು ಹೊಲದ ಕಡೆ ಹೋಗಿವ ರೈತನಿಗೆ ಖುಷಿಯೇ ಆದರೂ ಕೆಲಸಕ್ಕೆಂದು ಹೊರಡುವ ಜನಕ್ಕೆ ಕಿರಿಕಿರಿಯಾದಂತಾಗಿದೆ. ಇನ್ನು ಐದು ದಿನಗಳ ಕಾಲ ಮಳೆರಾಯ ಬೆಂಬಿಡದೆ ಸುರಿಯುತ್ತಾನೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇಂದಿ ಬೆಳಗ್ಗೆಯೇ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆಯಿಂದಾನೂ ಜಿಟಿಜಿಟಿ ಅಂತ ಮಳೆ ಹಿಡಿದುಕೊಂಡಿತ್ತು. ಇಂದು ಕೆಲವೇ ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಲಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದೆ. ಹೀಗಾಗಿ ಈ ಭಾಗಕ್ಕೆ ಪ್ರವಾಸಕ್ಕೆಂದು ಹೋಗುವ ಜನರು ಎಚ್ಚರದಿಂದ ಇರಬೇಕಾಗಿದೆ.

ಅದರಲ್ಲೂ ಚಿಕ್ಕಮಗಳೂರಿನ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್, ಬಾಳೂರು, ಕೊಟ್ಟಿಗೆಹಾರ, ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿರಲಿದೆ. ಚಿಕ್ಕಮಗಳೂರು ಭಾಗದಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಇನ್ನು ಎರಡು ದಿನ ಮಳೆಯ ಅಬ್ಬರ ಜೋರಾಗಿರಲಿದೆ. ಹೀಗಾಗಿ ಹೊರಗೆ ಹೋಗುವ ಜನರು ಕೂಡ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಮನೆಯಿಂದ ಹೊರಗೆ ಹೋಗುವಾಗ ರೇನ್ ಕೋಟ್, ಕೊಡೆಯನ್ನ ಮರೆಯದೆ ತೆಗೆದುಕೊಂಡು ಹೋಗಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment