Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮಿತಾಬ್ ಬಚ್ಚನ್ ಗೂ ಆಕ್ಷನ್ ಕಟ್ ಹೇಳಿದ್ದ ಕನ್ನಡದ ನಿರ್ದೇಶಕ ನಿಧನ..!

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಚಿತ್ರರಂಗ ಕಳೆದುಕೊಂಡಿದ್ದು ಮಾತ್ರ ದೊಡ್ಡದೊಡ್ಡವರನ್ನೇ. ಇದೀಗ ಮತ್ತೊಬ್ಬ ಶ್ರೇಷ್ಠ ನಿರ್ದೇಶಕನನ್ನ ಕಳೆದುಕೊಂಡು ಮಂಕಾಗಿದೆ. ನಿರ್ದೇಶಕ ಕೆ ವಿ ರಾಜು ಇಂದು ಎಲ್ಲರನ್ನ ಅಗಲಿದ್ದಾರೆ.

ಕೆ ವಿ ರಾಜು ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ, ರೈಟರ್ ಹಾಗೂ ಡೈಲಾಗ್ ರೈಟರ್ ಆಗಿದ್ದವರು. 1982ರಲ್ಲಿ ಚಿತ್ರರಂಗಕ್ಕೆ ಬಂದವರು ಮೊದಲ ಬಾರಿಗೆ ಬಾಡದ ಹೂ ಸಿನಿಮಾದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಲವೇ ಬದುಕು ಸಿನಿಮಾವನ್ನ ಮೊದಲ ಬಾರಿಗೆ ನಿರ್ದೇಶಿಸದ್ರು. ಅಲ್ಲಿಂದ ಒಂದಾದ ಮೇಲೆ ಒಂದರಂತೆ ಹಿಟ್ ಚಿತ್ರಗಳನ್ನೇ ಕೊಡುತ್ತಾ ಹೋದ್ರು.

ಯುದ್ಧಕಾಂಡ, ಬೆಳ್ಳಿಕಾಲುಂಗರ, ಬೆಳ್ಳಿ ಮೋಡಗಳು ಸೇರಿದಂತೆ ಹಲವಾರು ಸಿನಿಮಾ ನಿರ್ದೇಶಿಸಿದರು. ಅಷ್ಟೇ ಅಲ್ಲ ಅಮಿತಾಬ್ ಬಚ್ಚನ್ ಹಾಗೂ ಜಯಾ ಬಚ್ಚನ್ ನಟನೆಯ ಇಂದ್ರಜಿತ್ ಸಿನಿಮಾವನ್ನು ಇವರೇ ನಿರ್ದೇಶಿಸಿದ್ದರು. ಬಳಿಕ ಮತ್ತೆರಡು ಸಿನಿಮಾಗಳನ್ನ ಬಾಲಿವುಡ್ ಪ್ರಿಯರಿಗೆ ನೀಡಿದ್ದವರು.

ಕನ್ನಡ ಚಿತ್ರರಂಗಕ್ಕೆ ಇವರ ಕೊಡುಗೆ ಅಪಾರ. ಜಗ್ಗೇಶ್, ಶಶಿಕುಮಾರ್, ದೇವರಾಜ್ ಸೇರಿದಂತೆ ಅನೇಕರನ್ನ ಸೂಪರ್ ಸ್ಟಾರ್ ಮಾಡಿದ್ದು ಇವರ ಸಿನಿಮಾಗಳೇ. 2011ರ ರಾಜಧಾನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ ಬಳಿಕ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಇಂದು ಎಲ್ಲರನ್ನ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!