ಬೆಂಗಳೂರು; ಶಾಲೆಗಳ ರಜೆ ಮುಗಿದು, ಮಕ್ಕಳು ಬ್ಯಾಗ್ ಹಾಕಿಕೊಂಡು ಹೊರಡುವ ಸಮಯ ಬಂದೇ ಬಿಟ್ಟಿದೆ. ಆದರೆ ಇದರ ನಡುವೆ ಕೊರೊನಾ ಆತಂಕವೂ ಎದುರಾಗಿದೆ. ದಿನೇ ದಿನೇ ಕೊರೊನಾ ವೈರಸ್ ಹೆಚ್ಚಾಗ್ತಾ ಇದೆ. ಹೀಗಾಗಿ ಮಕ್ಕಳನ್ನ ಶಾಲೆಗೆ ಕಳುಹಿಸುವುದಕ್ಕೂ ಭಯಗೊಳ್ಳುತ್ತಿದ್ದಾರೆ. ಇದೀಗ ಪೋಷಕರ ಆತಂಕಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಜೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಅಂತಹವರಿಗೆ ರಜೆ ನೀಡಬೇಕು. ಕೊವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದರೆ, ಅದನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯಂತೆ ನಾವೂ ಜಾರಿ ಮಾಡುತ್ತೇವೆ. ಈವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವೆಉ ಅಧಿಕಾರುಗಳ ಜೊತೆಗೆ ಸಭೆ ಮಾಡಿ ಅದರಲ್ಲಿಯೇ ಕೆಲವು ಮಾರ್ಗಸೂಚಿಗಳನ್ನ ಸೂಚಿಸಿದ್ದು, ಅದನ್ನ ಪಾಲನೆ ಮಾಡುತ್ತೇವೆ ಎಂದಿದ್ದಾರೆ. ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆ ಕೂಡ ಜಾಗೃತಿಯನ್ನು ಮೂಡಿಸುತ್ತಿದೆ. ಈಗಾಗಲೇ ಕೊರೊನಾ ಟೆಸ್ಟ್ ಗಳನ್ನು ಮಾಡಿದೆ. ಹೋಮ್ ಐಸೋಲೇಷನ್ ನಲ್ಲಿ ಕೂಡ ಜನರನ್ನ ಇಟ್ಟಿದೆ, ಹಲವರಿಗೆ ಚಿಕಿತ್ಸೆಯನ್ನು ಕೂಡ ಮುಂದುವರೆಸಿದೆ. ಹೀಗಾಗಿ ಜನರು ಕೂಡ ಜಾಗೃತಿಯಿಂದ ಇರಬೇಕಾಗಿದೆ.


















