Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಹಿರಿಯ ವಕೀಲ ಡಾ.ಎಂ.ಸಿ.‌ನರಹರಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ. 01 : ಹರಿಹರಗುರು ಅಡ್ವೋಕೇಟ್ಸ್ ಅಂಡ್ ಅಸೋಸಿಯೇಟ್ಸ್ ನ ಹಿರಿಯ ವಕೀಲರು, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕರು, ಗಾಯಕರು, ರಂಗಭೂಮಿ ನಟ, ಅಂಬೇಡ್ಕರ್ ಚಿಂತಕ, ಮೀಸಲಾತಿ ಹೋರಾಟಗಾರರು, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ. ಎಂ.ಸಿ.ನರಹರಿ (53) ಅವರು ಅನಾರೋಗ್ಯದಿಂದ ಜೂನ್ 1 ರ ಭಾನುವಾರ ಬೆಳಗ್ಗೆ ನಿಧನ ಹೊಂದಿದರು.

ಎರಡು ದಿನಗಳ ಹಿಂದಷ್ಟೇ ಅನಾರೋಗ್ಯಕ್ಕೆ ತುತ್ತಾಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾಯಿ, ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಮಿತ್ರಬಳಗ ಬಂಧು ಬಳಗವನ್ನು ಅಗಲಿದ್ದಾರೆ. ಚಿತ್ರದುರ್ಗದ ಕೆಳಗೋಟೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಗ್ರಾಮ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬುರುಜಿನರೊಪ್ಪ ಸಮೀಪದ ಮರಡಿಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಟಿ.ಡಿ.ಗುರುನಾಥ್ ಅವರು ತಿಳಿಸಿದ್ದಾರೆ.

ಎರಡು ದಶಕಗಳ ಹಿಂದೆ ಬೆಂಗಳೂರಿನಲ್ಲಿ ಕನ್ನಡ ಪ್ರಭ ವರದಿಗಾರರಾಗಿದ್ದರು. ಚಿತ್ರದುರ್ಗ ನಗರದ ಕೆಳಗೋಟೆಯ ಐತಿಹಾಸಿಕ ಚನ್ನಕೇಶವ ದೇವಸ್ಥಾನ ಸಮಿತಿಯ ಧರ್ಮದರ್ಶಿಯಾಗಿ ಧಾರ್ಮಿಕ ಸೇವಾ ಕಾರ್ಯದಲ್ಲಿ ನಿರತರಾಗಿದ್ದರು.‌ ಒಳಮೀಸಲಾತಿ ಹೋರಾಟಗಾರದಲ್ಲಿ ಸಕ್ರಿಯವಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...