Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲ್ಲಡ್ಕ ಪ್ರಭಾಕರ್ ಭಟ್ ಗೆ ಕೋರ್ಟ್ ನಿಂದ ಬಿಗ್ ರಿಲೀಫ್..!

---Advertisement---

ಮಂಗಳೂರು; ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಸುಮಾರು ಕಡೆ ನಿಷೇಧ ಮಾಡಲಾಗಿತ್ತು. ಅವರ ಭಾಷಣ ಬೇಡ ಎಂದೇ ಹಲವರು ಹೇಳಿದ್ದರು. ಇದೀಗ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಯಾವುದೇ ರೀತಿಯ ಬಂಧನ ಸಹಿತ ಯಾವುದೇ ಒತ್ತಡದ ಕ್ರಮಗಳನ್ನ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಲಾಗಿದೆ. ಈ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ರಿಲ್ಯಾಕ್ಸ್ ಸಿಕ್ಕಂತಾಗಿದೆ.

ನ್ಯಾ.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠವೂ ಈ ಆದೇಶವನ್ನು ಹೊರಡಿಸಿ, ಜೂನ್ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಮೇ 12ರಂದಜ ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿಯ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸ್ವಾಸ್ಥ್ಯ ಕೆಎಉವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2)ರಡಿ ದೂರು ದಾಖಲಾಗಿತ್ತು. ದೂರಿನನ್ವಯ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಭಾಕರ್ ಅವರ ಪರವಾಗಿ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ವಾದವನ್ನು ಆಲಿಸಿದ ಹೈಕೋರ್ಟ್, ಪ್ರಭಾಕರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ರಿಲ್ಯಾಕ್ಸ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...