ಸುದ್ದಿಒನ್, ಚಿತ್ರದುರ್ಗ, ಜೂನ್. 05 : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ“ವಿಶ್ವ ಪರಿಸರ ದಿನಾಚರಣೆಯನ್ನು” ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಎಂ. ಪೃಥ್ವೀಶ ಮುಖ್ಯೋಪಾಧ್ಯಾಯರಾದ ಎನ್ ಜಿ ತಿಪ್ಪೇಸ್ವಾಮಿ, ಹಾಗೂ ಪ್ರಾಂಶುಪಾಲರಾದ ಬಸವರಾಜಯ್ಯ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಗಿಡಕ್ಕೆ ನೀರು ಎರೆಯುವ ಮೂಲಕ ನೆರವೇರಿಸಿದರು.
ಪರಿಸರ ಸಂರಕ್ಷಣೆಯ ಮಹತ್ವದ ಅರಿವನ್ನು ಮೂಡಿಸಲು ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾದ ಪೃಥ್ವೀಶ ಎಸ್.ಎಂ. ಅವರು ಮಾತನಾಡುತ್ತಾ 2025ರ ವಿಶ್ವ ಪರಿಸರ ದಿನದ ವಿಷಯದ ಕುರಿತು ಇಂದಿನ ಈ ಆಚರಣೆ ಕೇವಲ ಈ ದಿನಕ್ಕಷ್ಟೇ ಮೀಸಲಾಗದೇ ಪ್ರತಿ ದಿನ ಪರಿಸರದ ಬಗ್ಗೆ ಕಾಳಜಿಯನ್ನು ತೋರಿಸಬೇಕು. ಮುಖ್ಯವಾಗಿ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಕಡಿಮೆಗೊಳಿಸಿ ಸಾಧ್ಯವಾದಷ್ಟು ಮನೆಯಲ್ಲಿ ಸಿದ್ಧಪಡಿಸಿದ ಬಟ್ಟೆಯ ಕೈ ಚೀಲಗಳನ್ನು ಬಳಸಿರಿ ಎಂದರು. ಜೊತೆಗೆ ಮಕ್ಕಳೇ ಖುದ್ದಾಗಿ ನಿಮ್ಮ ಮನೆಗಳ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ನಿಮ್ಮ ಪೋಷಕರಿಗೆ ನೆರವಾಗಬೇಕು ಎಂದು ಪ್ರೇರಣದಾಯಕ ನುಡಿಗಳನ್ನಾಡಿದರು.
10ನೇ ತಗರತಿ ವಿದ್ಯಾರ್ಥಿ ಶಿಫಾ ಸ್ವಾಗತಿಸಿದರು. 10ನೇ ತಗರತಿಯ ಆಯೇಷಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 9ನೆ ತರಗತಿ ಲೇಖನ ಎಲ್ಲರಿಗೂ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ/ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















